ಕ್ರೀಡೆ

IND vs ENG 1st test: ಪೋಪ್‌ ಶತಕ; 126 ರನ್‌ ಮುನ್ನಡೆ ಸಾಧಿಸಿದ ಇಂಗ್ಲೆಂಡ್‌

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ನ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 126 ರನ್‌ಗಳ ಮುನ್ನಡೆ ಸಾಧಿಸಿದೆ.

ಎರಡನೇ ದಿನದಾಟಕ್ಕೆ 7 ವಿಕೆಟ್‌ ಕಳೆದುಕೊಂಡು 421 ರನ್‌ ಗಳಿಸಿ ಮೂರನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದ್ದ ಟೀಂ ಇಂಡಿಯಾ ಮೂರನೇ ದಿನದಾಟದಲ್ಲಿ ಉತ್ತಮ ಪ್ರದರ್ಶನ ತೋರಲಿಲ್ಲ. 81 ರನ್‌ ಗಳಿಸಿದ್ದ ಜಡೇಜಾ ಮೂರನೇ ದಿನ 87 ರನ್‌ ಗಳಿಸಿ ವಿವಾದಾತ್ಮಕ ಔಟ್‌ಗೆ ಬಲಿಯಾದರು. ಅಕ್ಷರ್‌ 44 ರನ್‌ ಬಾರಿಸಿ ನಿರ್ಗಮಿಸಿದರು. ಟೀಂ ಇಂಡಿಯಾ ಅಂತಿಮವಾಗಿ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 436ರನ್‌ ಬಾರಿಸಿ ಸರ್ವಪತನ ಕಂಡಿತು.

ಇಂಗ್ಲೆಂಡ್‌ ಪರ ಜೋ ರೂಟ್‌ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿ ಗಮನ ಸೆಳೆದರು. ಟಾಮ್‌ ಮತ್ತು ರಹೆನ್‌ ಅಹ್ಮದ್‌ ತಲಾ 2 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

190 ರನ್‌ಗಳ ಹಿನ್ನಡೆಯೊಂದಿಗೆ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 77 ಓವರ್‌ ಬ್ಯಾಟಿಂಗ್‌ ಮಾಡಿ, ಪ್ರಮುಖ 6 ವಿಕೆಟ್‌ ಕಳೆದುಕೊಂಡು 316 ರನ್‌ ಕಲೆಹಾಕಿ 126 ರನ್‌ಗಳ ಮುನ್ನಡೆಯೊಂದಿಗೆ ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದೆ.

ಇಂಗ್ಲೆಂಡ್‌ ಪರ ಡಕೆಟ್‌ (44), ಕ್ರಾಲಿ (31), ಬೆನ್‌ ಫೋಕ್ಸ್‌ (34) ಚೇತರಿಕೆ ಆಟ ಆಡಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸುಭದ್ರವಾಗಿ ಇನ್ನಿಂಗ್ಸ್‌ ಕಟ್ಟಿದ ಪೋಪ್‌ ಶತಕ ಬಾರಸುವ ಮೂಲಕ ಇಂಗ್ಲೆಂಡ್‌ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಕಮ್‌ಬ್ಯಾಕ್‌ ಮಾಡಲು ಸಹಕರಿಸಿದರು. ಪೋಪ್‌ ಶತಕ (148) ಮತ್ತು ಸ್ಪಿನ್ನರ್‌ ರೆಹನ್‌ ಅಹ್ಮದ್‌ (16) ರನ್‌ ಗಳಿಸಿ ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಪರ ರವಿಚಂದ್ರನ್‌ ಅಶ್ವಿನ್‌ ಮತ್ತು ಜಸ್‌ಪ್ರಿತ್‌ ಬುಮ್ರಾ ತಲಾ ಎರಡು ವಿಕೆಟ್‌ ಪಡೆದರೆ, ಅಕ್ಷರ್‌ ಪಟೇಲ್‌ ಮತ್ತು ಜಡೇಜಾ ತಲಾ ಒಂದು ವಿಕೆಟ್‌ ಕಿತ್ತರು.

ಇನ್ನಿಂಗ್ಸ್‌ ವಿವರ:

ಮೊಲದ ಇನ್ನಿಂಗ್ಸ್‌: ಇಂಗ್ಲೆಂಡ್-‌ 246-10 (64.3 ಓವರ್‌), ಟೀಂ ಇಂಡಿಯಾ- 436-10 (121 ಓವರ್‌)
ಎರಡನೇ ಇನ್ನಿಂಗ್ಸ್‌: ಇಂಗ್ಲೆಂಡ್‌- 316-6 (77 ಓವರ್‌)

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

6 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

6 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

6 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

6 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

6 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

7 hours ago