ಕ್ರೀಡೆ

IND vs ENG 1st test: ಪೋಪ್‌ ಶತಕ; 126 ರನ್‌ ಮುನ್ನಡೆ ಸಾಧಿಸಿದ ಇಂಗ್ಲೆಂಡ್‌

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ನ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 126 ರನ್‌ಗಳ ಮುನ್ನಡೆ ಸಾಧಿಸಿದೆ.

ಎರಡನೇ ದಿನದಾಟಕ್ಕೆ 7 ವಿಕೆಟ್‌ ಕಳೆದುಕೊಂಡು 421 ರನ್‌ ಗಳಿಸಿ ಮೂರನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದ್ದ ಟೀಂ ಇಂಡಿಯಾ ಮೂರನೇ ದಿನದಾಟದಲ್ಲಿ ಉತ್ತಮ ಪ್ರದರ್ಶನ ತೋರಲಿಲ್ಲ. 81 ರನ್‌ ಗಳಿಸಿದ್ದ ಜಡೇಜಾ ಮೂರನೇ ದಿನ 87 ರನ್‌ ಗಳಿಸಿ ವಿವಾದಾತ್ಮಕ ಔಟ್‌ಗೆ ಬಲಿಯಾದರು. ಅಕ್ಷರ್‌ 44 ರನ್‌ ಬಾರಿಸಿ ನಿರ್ಗಮಿಸಿದರು. ಟೀಂ ಇಂಡಿಯಾ ಅಂತಿಮವಾಗಿ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 436ರನ್‌ ಬಾರಿಸಿ ಸರ್ವಪತನ ಕಂಡಿತು.

ಇಂಗ್ಲೆಂಡ್‌ ಪರ ಜೋ ರೂಟ್‌ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿ ಗಮನ ಸೆಳೆದರು. ಟಾಮ್‌ ಮತ್ತು ರಹೆನ್‌ ಅಹ್ಮದ್‌ ತಲಾ 2 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

190 ರನ್‌ಗಳ ಹಿನ್ನಡೆಯೊಂದಿಗೆ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 77 ಓವರ್‌ ಬ್ಯಾಟಿಂಗ್‌ ಮಾಡಿ, ಪ್ರಮುಖ 6 ವಿಕೆಟ್‌ ಕಳೆದುಕೊಂಡು 316 ರನ್‌ ಕಲೆಹಾಕಿ 126 ರನ್‌ಗಳ ಮುನ್ನಡೆಯೊಂದಿಗೆ ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದೆ.

ಇಂಗ್ಲೆಂಡ್‌ ಪರ ಡಕೆಟ್‌ (44), ಕ್ರಾಲಿ (31), ಬೆನ್‌ ಫೋಕ್ಸ್‌ (34) ಚೇತರಿಕೆ ಆಟ ಆಡಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸುಭದ್ರವಾಗಿ ಇನ್ನಿಂಗ್ಸ್‌ ಕಟ್ಟಿದ ಪೋಪ್‌ ಶತಕ ಬಾರಸುವ ಮೂಲಕ ಇಂಗ್ಲೆಂಡ್‌ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಕಮ್‌ಬ್ಯಾಕ್‌ ಮಾಡಲು ಸಹಕರಿಸಿದರು. ಪೋಪ್‌ ಶತಕ (148) ಮತ್ತು ಸ್ಪಿನ್ನರ್‌ ರೆಹನ್‌ ಅಹ್ಮದ್‌ (16) ರನ್‌ ಗಳಿಸಿ ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಪರ ರವಿಚಂದ್ರನ್‌ ಅಶ್ವಿನ್‌ ಮತ್ತು ಜಸ್‌ಪ್ರಿತ್‌ ಬುಮ್ರಾ ತಲಾ ಎರಡು ವಿಕೆಟ್‌ ಪಡೆದರೆ, ಅಕ್ಷರ್‌ ಪಟೇಲ್‌ ಮತ್ತು ಜಡೇಜಾ ತಲಾ ಒಂದು ವಿಕೆಟ್‌ ಕಿತ್ತರು.

ಇನ್ನಿಂಗ್ಸ್‌ ವಿವರ:

ಮೊಲದ ಇನ್ನಿಂಗ್ಸ್‌: ಇಂಗ್ಲೆಂಡ್-‌ 246-10 (64.3 ಓವರ್‌), ಟೀಂ ಇಂಡಿಯಾ- 436-10 (121 ಓವರ್‌)
ಎರಡನೇ ಇನ್ನಿಂಗ್ಸ್‌: ಇಂಗ್ಲೆಂಡ್‌- 316-6 (77 ಓವರ್‌)

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

9 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

9 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

9 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

9 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

9 hours ago