ಕ್ರೀಡೆ

IND vs ENG 1st test: ಪೋಪ್‌ ಶತಕ; 126 ರನ್‌ ಮುನ್ನಡೆ ಸಾಧಿಸಿದ ಇಂಗ್ಲೆಂಡ್‌

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ನ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 126 ರನ್‌ಗಳ ಮುನ್ನಡೆ ಸಾಧಿಸಿದೆ.

ಎರಡನೇ ದಿನದಾಟಕ್ಕೆ 7 ವಿಕೆಟ್‌ ಕಳೆದುಕೊಂಡು 421 ರನ್‌ ಗಳಿಸಿ ಮೂರನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದ್ದ ಟೀಂ ಇಂಡಿಯಾ ಮೂರನೇ ದಿನದಾಟದಲ್ಲಿ ಉತ್ತಮ ಪ್ರದರ್ಶನ ತೋರಲಿಲ್ಲ. 81 ರನ್‌ ಗಳಿಸಿದ್ದ ಜಡೇಜಾ ಮೂರನೇ ದಿನ 87 ರನ್‌ ಗಳಿಸಿ ವಿವಾದಾತ್ಮಕ ಔಟ್‌ಗೆ ಬಲಿಯಾದರು. ಅಕ್ಷರ್‌ 44 ರನ್‌ ಬಾರಿಸಿ ನಿರ್ಗಮಿಸಿದರು. ಟೀಂ ಇಂಡಿಯಾ ಅಂತಿಮವಾಗಿ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 436ರನ್‌ ಬಾರಿಸಿ ಸರ್ವಪತನ ಕಂಡಿತು.

ಇಂಗ್ಲೆಂಡ್‌ ಪರ ಜೋ ರೂಟ್‌ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿ ಗಮನ ಸೆಳೆದರು. ಟಾಮ್‌ ಮತ್ತು ರಹೆನ್‌ ಅಹ್ಮದ್‌ ತಲಾ 2 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

190 ರನ್‌ಗಳ ಹಿನ್ನಡೆಯೊಂದಿಗೆ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 77 ಓವರ್‌ ಬ್ಯಾಟಿಂಗ್‌ ಮಾಡಿ, ಪ್ರಮುಖ 6 ವಿಕೆಟ್‌ ಕಳೆದುಕೊಂಡು 316 ರನ್‌ ಕಲೆಹಾಕಿ 126 ರನ್‌ಗಳ ಮುನ್ನಡೆಯೊಂದಿಗೆ ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದೆ.

ಇಂಗ್ಲೆಂಡ್‌ ಪರ ಡಕೆಟ್‌ (44), ಕ್ರಾಲಿ (31), ಬೆನ್‌ ಫೋಕ್ಸ್‌ (34) ಚೇತರಿಕೆ ಆಟ ಆಡಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸುಭದ್ರವಾಗಿ ಇನ್ನಿಂಗ್ಸ್‌ ಕಟ್ಟಿದ ಪೋಪ್‌ ಶತಕ ಬಾರಸುವ ಮೂಲಕ ಇಂಗ್ಲೆಂಡ್‌ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಕಮ್‌ಬ್ಯಾಕ್‌ ಮಾಡಲು ಸಹಕರಿಸಿದರು. ಪೋಪ್‌ ಶತಕ (148) ಮತ್ತು ಸ್ಪಿನ್ನರ್‌ ರೆಹನ್‌ ಅಹ್ಮದ್‌ (16) ರನ್‌ ಗಳಿಸಿ ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಪರ ರವಿಚಂದ್ರನ್‌ ಅಶ್ವಿನ್‌ ಮತ್ತು ಜಸ್‌ಪ್ರಿತ್‌ ಬುಮ್ರಾ ತಲಾ ಎರಡು ವಿಕೆಟ್‌ ಪಡೆದರೆ, ಅಕ್ಷರ್‌ ಪಟೇಲ್‌ ಮತ್ತು ಜಡೇಜಾ ತಲಾ ಒಂದು ವಿಕೆಟ್‌ ಕಿತ್ತರು.

ಇನ್ನಿಂಗ್ಸ್‌ ವಿವರ:

ಮೊಲದ ಇನ್ನಿಂಗ್ಸ್‌: ಇಂಗ್ಲೆಂಡ್-‌ 246-10 (64.3 ಓವರ್‌), ಟೀಂ ಇಂಡಿಯಾ- 436-10 (121 ಓವರ್‌)
ಎರಡನೇ ಇನ್ನಿಂಗ್ಸ್‌: ಇಂಗ್ಲೆಂಡ್‌- 316-6 (77 ಓವರ್‌)

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago