ಕ್ರೀಡೆ

IND vs ENG 1st test: ಟೀಂ ಇಂಡಿಯಾಗೆ 28 ರನ್‌ಗಳ ಸೋಲು!

ಹೈದರಾಬಾದ್​: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 28 ರನ್​ಗಳ ಸೋಲು ಅನುಭವಿಸಿದೆ.

ಈ ಪಂದ್ಯದ ಗೆಲುವಿನೊಂದಿಗೆ ಇಂಗ್ಲೆಂಡ್‌ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ 231ರನ್‌ ಗುರಿ ನೀಡಿದ ಇಂಗ್ಲೆಂಡ್‌, ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಸಾಧಾರಣ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 202 ರನ್‌ ಗಳಿಗೆ ಆಲ್‌ಔಟ್‌ ಆಗುವ ಮೂಲಕ 28 ರನ್‌ ಗಳಿಂದ ಸೋಲನುಭವಿಸಿತು.

ಟೀಂ ಇಂಡಿಯಾ ಪರವಾಗಿ ನಾಯಕ ರೋಹಿತ್‌ ಶರ್ಮಾ 39 ರನ್‌ ಗಳಿಸಿದ್ದೇ ತಂಡದ ಪರವಾಗಿ ಅತಿಹೆಚ್ಚು ರನ್‌. ಕಳೆದ ಪಂದ್ಯದಲ್ಲಿ ವಿವಾದಾತ್ಮಕವಾಗಿ ಔಟಾಗಿದ್ದ ಜಡೇಜಾ, ಈ ಪಂದ್ಯದಲ್ಲಿ ರನ್‌ಔಟ್‌ ಆಗಿ ಹೊರನಡೆದರು.

ಇಂಗ್ಲೆಂಡ್‌ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಟಾಮ್‌ ಹಾರ್ಟ್ಲಿ 7 ವಿಕೆಟ್‌ ಪಡೆದು ಭಾರತ ತಂಡದಿಂದ ಗೆಲುವನ್ನು ಕಸಿದುಕೊಂಡರು.

ಎರಡನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದ ಒಲಿ ಪೋಪ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್‌:

ಇಂಗ್ಲೆಂಡ್‌: ಮೊಲದ ಇನ್ನಿಂಗ್ಸ್‌ 246 ಮತ್ತು ಎರಡನೇ ಇನ್ನಿಂಗ್ಸ್‌ 420
ಟೀಂ ಇಂಡಿಯಾ: ಮೊಲದ ಇನ್ನಿಂಗ್ಸ್‌ 436 ಮತ್ತು ಎರಡನೇ ಇನ್ನಿಂಗ್ಸ್‌ 202

andolanait

Recent Posts

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

14 mins ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

57 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

2 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

3 hours ago