ಕ್ರೀಡೆ

IND vs ENG 1st test: ಟೀಂ ಇಂಡಿಯಾಗೆ 28 ರನ್‌ಗಳ ಸೋಲು!

ಹೈದರಾಬಾದ್​: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 28 ರನ್​ಗಳ ಸೋಲು ಅನುಭವಿಸಿದೆ.

ಈ ಪಂದ್ಯದ ಗೆಲುವಿನೊಂದಿಗೆ ಇಂಗ್ಲೆಂಡ್‌ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ 231ರನ್‌ ಗುರಿ ನೀಡಿದ ಇಂಗ್ಲೆಂಡ್‌, ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಸಾಧಾರಣ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 202 ರನ್‌ ಗಳಿಗೆ ಆಲ್‌ಔಟ್‌ ಆಗುವ ಮೂಲಕ 28 ರನ್‌ ಗಳಿಂದ ಸೋಲನುಭವಿಸಿತು.

ಟೀಂ ಇಂಡಿಯಾ ಪರವಾಗಿ ನಾಯಕ ರೋಹಿತ್‌ ಶರ್ಮಾ 39 ರನ್‌ ಗಳಿಸಿದ್ದೇ ತಂಡದ ಪರವಾಗಿ ಅತಿಹೆಚ್ಚು ರನ್‌. ಕಳೆದ ಪಂದ್ಯದಲ್ಲಿ ವಿವಾದಾತ್ಮಕವಾಗಿ ಔಟಾಗಿದ್ದ ಜಡೇಜಾ, ಈ ಪಂದ್ಯದಲ್ಲಿ ರನ್‌ಔಟ್‌ ಆಗಿ ಹೊರನಡೆದರು.

ಇಂಗ್ಲೆಂಡ್‌ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಟಾಮ್‌ ಹಾರ್ಟ್ಲಿ 7 ವಿಕೆಟ್‌ ಪಡೆದು ಭಾರತ ತಂಡದಿಂದ ಗೆಲುವನ್ನು ಕಸಿದುಕೊಂಡರು.

ಎರಡನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದ ಒಲಿ ಪೋಪ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್‌:

ಇಂಗ್ಲೆಂಡ್‌: ಮೊಲದ ಇನ್ನಿಂಗ್ಸ್‌ 246 ಮತ್ತು ಎರಡನೇ ಇನ್ನಿಂಗ್ಸ್‌ 420
ಟೀಂ ಇಂಡಿಯಾ: ಮೊಲದ ಇನ್ನಿಂಗ್ಸ್‌ 436 ಮತ್ತು ಎರಡನೇ ಇನ್ನಿಂಗ್ಸ್‌ 202

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago