ಕ್ರೀಡೆ

IND vs ENG 2nd test: ಮೂರನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 67/1

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್‌ ರಾಜಶೇಖರ ರೆಡ್ಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡೋ-ಆಂಗ್ಲರ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್​ಗಳ ಹಿನ್ನಡೆಯಲ್ಲಿದೆ.

ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್​ಗೆ ವಿಕೆಟ್‌ ಒಪಪ್ಪಿಸದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್​ಗೆ 399 ರನ್ ಗುರಿ ನೀಡಿತು.

ಟೀಂ ಇಂಡಿಯಾ ಪರ ಆರಂಭಿಕ ಶುಭ್​ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿ ತಂಡಕ್ಕೆ ಆಸರೆಯಾದರು. ಆಲ್​ರೌಂಡರ್ ಅಕ್ಷರ್ ಪಟೇಲ್ 45 ರನ್​, ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ ಬಾರಿಸಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೇವಲ 13 ರನ್​ಗಳಿಸಿ ಪೆವಿಲಿಯನ್ ದಾರಿಯಿಡಿದರು.

ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್‌, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಸ್ಕೋರ್‌ ವಿವರ:
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌: 396/10
ಇಂಗ್ಲೆಂಡ್‌ ಮೊಲದ ಇನ್ನಿಂಗ್ಸ್‌: 253/10
ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌: 255/10
ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌: 67/1 (ನಾಲ್ಕನೇ ದಿನಕ್ಕೆ ಆಟ ಕಾಯ್ದಿರಿಸಲಾಗಿದೆ.)

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago