ಕ್ರೀಡೆ

IND vs ENG 2nd test: ಜೈಸ್ವಾಲ್‌ ದ್ವಿಶತಕ; 396ಕ್ಕೆ ಟೀಂ ಇಂಡಿಯಾ ಆಲ್‌ಔಟ್‌

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೈಸ್ವಾಲ್‌ ಅವರ ದ್ವಿಶತಕ ಬಲದಿಂದ ಟೀಮ್ ಇಂಡಿಯಾ 396 ರನ್‌ ಕಲೆ ಹಾಕಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾಗೆ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಭಾರತ ತಂಡ ನಾಯಕನ ಜೊತೆಗೂಡಿ ಇನಿಂಗ್ಸ್​ ಆರಂಭಿಸಿದ ಜೈಸ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಆದರೆ ಮತ್ತೊಂದೆಡೆ ಕೇವಲ 14 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರು.

ಆ ಬಳಿಕ ಬಂದ ಶುಭ್​ಮನ್ ಗಿಲ್ 34 ರನ್ ಬಾರಿಸಿದರೆ, ಶ್ರೇಯಸ್ ಅಯ್ಯರ್ 27 ರನ್ ಕಲೆಹಾಕಿದರು. ಇನ್ನು ರಜತ್ ಪಾಟಿದಾರ್ 32, ಅಕ್ಷರ್ ಪಟೇಲ್ 27 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದರ ಬೆನ್ನಲ್ಲೇ ಶ್ರೀಕರ್ ಭರತ್ (17) ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಯಶಸ್ವಿ ಜೈಸ್ವಾಲ್ 151 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು. ಅಲ್ಲದೆ ಮೊದಲ ದಿನದಾಟದ ಅಂತ್ಯಕ್ಕೆ ಜೈಸ್ವಾಲ್ 179 ರನ್ ಬಾರಿಸಿ ಭಾರತ ತಂಡ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 336 ಕ್ಕೆ ತಂದು ನಿಲ್ಲಿಸಿದರು.

ಇಂದು ತಮ್ಮ ಅದೇ ಫಾರ್ಮ್‌ ಮುಂದುವರಿಸಿದ ಜೈಸ್ವಾಲ್‌ 290 ಎಸೆತಗಳಲ್ಲಿ 19 ಬೌಂಡರಿ ಮತ್ತು 7 ಸಿಕ್ಸರ್‌ ಸಹಿತ 209 ಬಾರಿಸಿ ತಂಡಕ್ಕೆ ಆಸರೆಯಾದರು. ಅಶ್ವಿನ್ (20) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಜಸ್​ಪ್ರೀತ್ ಬುಮ್ರಾ 6 ರನ್​ಗಳಿಸಿ ರೆಹಾನ್ ಅಹ್ಮದ್ ಎಸೆತದಲ್ಲಿ ಕ್ಯಾಚ್ ನೀಡಿದರು. ಇನ್ನು ಕೊನೆಯ ವಿಕೆಟ್​ ಆಗಿ ಮುಖೇಶ್ ಕುಮಾರ್ (0) ಔಟಾದರು. ಈ ಮೂಲಕ ಟೀಮ್ ಇಂಡಿಯಾ ತನ್ನ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ​ 396 ರನ್​ ಕಲೆಹಾಕಿ ಆಲೌಟ್ ಆಯಿತು.

ಇತ್ತ ಇಂಗ್ಲೆಂಡ್‌ ಪರ ಆಂಡರ್‌ಸನ್‌ 47/3, ಬಷೀರ್‌ 138/3 ಮತ್ತು ರೆಹನ್‌ ಅಹ್ಮದ್‌ 65/3 ವಿಕೆಟ್‌ ಪಡೆದು ಮಿಂಚಿದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago