ಕ್ರೀಡೆ

IND vs ENG 2nd test: ಜೈಸ್ವಾಲ್‌ ದ್ವಿಶತಕ; 396ಕ್ಕೆ ಟೀಂ ಇಂಡಿಯಾ ಆಲ್‌ಔಟ್‌

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೈಸ್ವಾಲ್‌ ಅವರ ದ್ವಿಶತಕ ಬಲದಿಂದ ಟೀಮ್ ಇಂಡಿಯಾ 396 ರನ್‌ ಕಲೆ ಹಾಕಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾಗೆ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಭಾರತ ತಂಡ ನಾಯಕನ ಜೊತೆಗೂಡಿ ಇನಿಂಗ್ಸ್​ ಆರಂಭಿಸಿದ ಜೈಸ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಆದರೆ ಮತ್ತೊಂದೆಡೆ ಕೇವಲ 14 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರು.

ಆ ಬಳಿಕ ಬಂದ ಶುಭ್​ಮನ್ ಗಿಲ್ 34 ರನ್ ಬಾರಿಸಿದರೆ, ಶ್ರೇಯಸ್ ಅಯ್ಯರ್ 27 ರನ್ ಕಲೆಹಾಕಿದರು. ಇನ್ನು ರಜತ್ ಪಾಟಿದಾರ್ 32, ಅಕ್ಷರ್ ಪಟೇಲ್ 27 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು. ಇದರ ಬೆನ್ನಲ್ಲೇ ಶ್ರೀಕರ್ ಭರತ್ (17) ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಯಶಸ್ವಿ ಜೈಸ್ವಾಲ್ 151 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು. ಅಲ್ಲದೆ ಮೊದಲ ದಿನದಾಟದ ಅಂತ್ಯಕ್ಕೆ ಜೈಸ್ವಾಲ್ 179 ರನ್ ಬಾರಿಸಿ ಭಾರತ ತಂಡ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 336 ಕ್ಕೆ ತಂದು ನಿಲ್ಲಿಸಿದರು.

ಇಂದು ತಮ್ಮ ಅದೇ ಫಾರ್ಮ್‌ ಮುಂದುವರಿಸಿದ ಜೈಸ್ವಾಲ್‌ 290 ಎಸೆತಗಳಲ್ಲಿ 19 ಬೌಂಡರಿ ಮತ್ತು 7 ಸಿಕ್ಸರ್‌ ಸಹಿತ 209 ಬಾರಿಸಿ ತಂಡಕ್ಕೆ ಆಸರೆಯಾದರು. ಅಶ್ವಿನ್ (20) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಜಸ್​ಪ್ರೀತ್ ಬುಮ್ರಾ 6 ರನ್​ಗಳಿಸಿ ರೆಹಾನ್ ಅಹ್ಮದ್ ಎಸೆತದಲ್ಲಿ ಕ್ಯಾಚ್ ನೀಡಿದರು. ಇನ್ನು ಕೊನೆಯ ವಿಕೆಟ್​ ಆಗಿ ಮುಖೇಶ್ ಕುಮಾರ್ (0) ಔಟಾದರು. ಈ ಮೂಲಕ ಟೀಮ್ ಇಂಡಿಯಾ ತನ್ನ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ​ 396 ರನ್​ ಕಲೆಹಾಕಿ ಆಲೌಟ್ ಆಯಿತು.

ಇತ್ತ ಇಂಗ್ಲೆಂಡ್‌ ಪರ ಆಂಡರ್‌ಸನ್‌ 47/3, ಬಷೀರ್‌ 138/3 ಮತ್ತು ರೆಹನ್‌ ಅಹ್ಮದ್‌ 65/3 ವಿಕೆಟ್‌ ಪಡೆದು ಮಿಂಚಿದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago