ಕ್ರೀಡೆ

INd vs ENG 2nd test: ಶುಭ್‌ಮನ್‌ ಗಿಲ್‌ ಶತಕ; ಇಂಗ್ಲೆಂಡ್‌ಗೆ 399 ರನ್‌ ಗುರಿ ನೀಡಿದ ಭಾರತ

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ ಎಸ್‌ ರಾಯರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಗೆ 399 ರನ್‌ ಗುರಿ ನೀಡಿದೆ.

ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 78.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 255 ರನ್‌ ಕಲೆಹಾಕಿ ಆಂಗ್ಲ ಪಡೆಗೆ 399 ರನ್‌ ಟಾರ್ಗೆಟ್‌ ನೀಡಿದೆ.

ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿ ಟೀಂ ಇಂಡಿಯಾಗೆ ಇಂಗ್ಲೆಂಡ್‌ ವೇಗಿ ಆಂಡರ್‌ಸನ್‌ ಆರಂಭಿಕ ಆಘಾತ ನೀಡಿದರು. ತನ್ನ ಒಂದೇ ಓವರ್‌ನಲ್ಲಿ ಜೈಸ್ವಾಲ್‌ (17) ಮತ್ತು ನಾಯಕ ರೋಹಿತ್‌ ಶರ್ಮಾ (13) ವಿಕೆಟ್‌ ಪಡೆದರು. ಇದರ ನಡುವೆ ತಾಳ್ಮೆಯ ಆಟವಾಡಿದ ಶುಭ್‌ಮನ್‌ ಗಿಲ್‌ (104) ಶತಕ ದಾಖಲಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಅಯ್ಯರ್‌ (29), ಅಶ್ವಿನ್‌ (29) ಮತ್ತು ಅಕ್ಷರ್‌ ಪಟೇಲ್‌ (45) ರನ್‌ ಬಾರಿಸಿ ಗಮನ ಸೆಳೆದರು.

ಇತ್ತ ಇಂಗ್ಲೆಂಡ್‌ ಪರ ಉತ್ತಮ ಬೌಲಿಂಗ್‌ ದಾಳಿ ನಡೆಸಿದ ಟಾಮ್‌ ಹಾರ್ಟ್ಲಿ 77/4, ರೆಹೆನ್‌ ಅಹ್ಮದ್‌ 88/3 ಮತ್ತು ಆಂಡರ್‌ಸನ್‌ 29/2 ವಿಕೆಟ್‌ ಪಡೆದರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago