ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಜಯ ಸಾಧಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡು 47.4 ಓವರ್ಗಳಲ್ಲಿ 248 ರನ್ಗೆ ಆಲ್ಔಟ್ ಆಗಿ ಇಂಗ್ಲೆಂಡ್ಗೆ 249 ರನ್ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಭಾರತ 38.4 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿತು.
ಇಂಗ್ಲೆಂಡ್ ಇನ್ನಿಂಗ್ಸ್: ಫಿಲಿಪ್ ಸಾಲ್ಟ್ 43, ಬೆನ್ ಡಕೆಟ್ 32, ಜೋ ರೂಟ್ 19, ಹ್ಯಾರಿ ಬ್ರೂಕ್ 0, ಜೋಸ್ ಬಟ್ಲರ್ 52, ಜೇಕಬ್ ಬೆಥೆಲ್ 51, ಲಿಯಾಮ್ ಲಿವಿಂಗ್ಸ್ಟನ್ 5, ಬ್ರೈಡನ್ ಕೇರ್ಸ್ 10, ಆದಿಲ್ ರಶೀದ್ 8, ಸಕೀಬ್ ಮಹ್ಮೂದ್ 2 ಹಾಗೂ ಜೋಫ್ರಾ ಆರ್ಚರ್ ಅಜೇಯ 21 ರನ್ ಗಳಿಸಿದರು.
ಭಾರತದ ಪರ ಹರ್ಷಿತ್ ರಾಣಾ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತದ ಇನ್ನಿಂಗ್ಸ್: ಯಶಸ್ವಿ ಜೈಸ್ವಾಲ್ 15, ರೋಹಿತ್ ಶರ್ಮಾ 2, ಶುಬ್ಮನ್ ಗಿಲ್ 87, ಶ್ರೇಯಸ್ ಐಯ್ಯರ್ 59, ಅಕ್ಷರ್ ಪಟೇಲ್ 52, ಕೆಎಲ್ ರಾಹುಲ್ 2, ಹಾರ್ದಿಕ್ ಪಾಂಡ್ಯ ಅಜೇಯ 9 ಹಾಗೂ ರವೀಂದ್ರ ಜಡೇಜಾ ಅಜೇಯ 12 ರನ್ ಗಳಿಸಿದರು.
ಇಂಗ್ಲೆಂಡ್ ಪರ ಸಕೀಬ್ ಮಹ್ಮೂದ್ ಹಾಗೂ ಆದಿಲ್ ರಶೀದ್ ತಲಾ ಎರಡು ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್ ಹಾಗೂ ಜೇಕಬ್ ಬೆಥೆಲ್ ತಲಾ ಒಂದೊಂದು ವಿಕೆಟ್ ಪಡೆದರು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…