ಕ್ರೀಡೆ

IND vs ENG test: ಪಂದ್ಯ ವೀಕ್ಷಣೆಗೆ ಸೈನಿಕರ ಕುಟುಂಬಗಳಿಗೆ ಪ್ರವೇಶ ಉಚಿತ!

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 25 ರಂದು ನಡೆಯಲಿರುವ ಇಂಡೋ-ಆಂಗ್ಲರ ಮೊದಲ ಟೆಸ್ಟ್‌ ಪಂದ್ಯ ನಡೆಯಲಿದೆ. ಈ ಪಂದ್ಯದ ಎರಡನೇ ದಿನ ಭಾರತ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆ (ಎಚ್‌ಸಿಎ) ತಿಳಿಸಿದೆ.

ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯುವ ದಿನದಾಟವನ್ನು ವೀಕ್ಷಿಸಲು ಭಾರತೀಯ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು. ಈ ಮೂಲಕ ಭಾರತೀಯ ಸೈನಿಕರ ಕುಟುಂಬದವರನ್ನು ಗೌರವಿಸಲು ಹೆಚ್​ಸಿಎ ನಿರ್ಧರಿಸಿದ್ದು, ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ.

ಮೊದಲ ಟೆಸ್ಟ್‌ ಪಂದ್ಯದ ಟಿಕೆಟ್‌ಗಳು ಜನವರಿ 18 ರಿಂದ Paytm ಇನ್‌ಸೈಡರ್ ಅಪ್ಲಿಕೇಶನ್ ಮತ್ತು www.insider.in ಆನ್‌ಲೈನ್‌ನಲ್ಲಿ ಲಭ್ಯವಿರಲಿದೆ. ಆಫ್‌ಲೈನ್ ಟಿಕೆಟ್‌ಗಳ ಮಾರಾಟವು ಜಿಮ್ಖಾನಾ ಮೈದಾನದಲ್ಲಿ ಜನವರಿ 22 ರಿಂದ ಪ್ರಾರಂಭವಾಗಲಿದೆ. ಇಲ್ಲಿ ಪ್ರತಿ ದಿನದ ಟಿಕೆಟ್‌ಗಳ ಬೆಲೆ ₹200 ರಿಂದ ₹4,000 ವರೆಗೆ ಇರುತ್ತದೆ.

ಶಾಲಾ ಮಕ್ಕಳಿಗೂ ಪ್ರವೇಶ ಉಚಿತ:
ತೆಲಂಗಾಣ ಸರ್ಕಾರಿ ಶಾಲೆಯ VI ರಿಂದ XII ತರಗತಿಯ ವಿದ್ಯಾರ್ಥಿಗಳನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಹೈದಾರಾಬಾದ್​ ಕ್ರಿಕೆಟ್ ಸಂಸ್ಥೆ ಆಹ್ವಾನಿಸಿದೆ. ತಮ್ಮ ಐಡಿ ಕಾರ್ಡ್ ತೋರಿಸಿ ಉಚಿತ ಪ್ರವೇಶ ಪಡೆಯಬಹುದು. ಹಾಗೆಯೇ ಶಾಲಾ ಸಮವಸ್ತ್ರವನ್ನು ಧರಿಸಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸಲಾಗುವುದು ಎಂದು ಹೆಚ್​ಸಿಎ ತಿಳಿಸಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago