ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 25 ರಂದು ನಡೆಯಲಿರುವ ಇಂಡೋ-ಆಂಗ್ಲರ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದ ಎರಡನೇ ದಿನ ಭಾರತ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್ಸಿಎ) ತಿಳಿಸಿದೆ.
ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯುವ ದಿನದಾಟವನ್ನು ವೀಕ್ಷಿಸಲು ಭಾರತೀಯ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು. ಈ ಮೂಲಕ ಭಾರತೀಯ ಸೈನಿಕರ ಕುಟುಂಬದವರನ್ನು ಗೌರವಿಸಲು ಹೆಚ್ಸಿಎ ನಿರ್ಧರಿಸಿದ್ದು, ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ.
ಮೊದಲ ಟೆಸ್ಟ್ ಪಂದ್ಯದ ಟಿಕೆಟ್ಗಳು ಜನವರಿ 18 ರಿಂದ Paytm ಇನ್ಸೈಡರ್ ಅಪ್ಲಿಕೇಶನ್ ಮತ್ತು www.insider.in ಆನ್ಲೈನ್ನಲ್ಲಿ ಲಭ್ಯವಿರಲಿದೆ. ಆಫ್ಲೈನ್ ಟಿಕೆಟ್ಗಳ ಮಾರಾಟವು ಜಿಮ್ಖಾನಾ ಮೈದಾನದಲ್ಲಿ ಜನವರಿ 22 ರಿಂದ ಪ್ರಾರಂಭವಾಗಲಿದೆ. ಇಲ್ಲಿ ಪ್ರತಿ ದಿನದ ಟಿಕೆಟ್ಗಳ ಬೆಲೆ ₹200 ರಿಂದ ₹4,000 ವರೆಗೆ ಇರುತ್ತದೆ.
ಶಾಲಾ ಮಕ್ಕಳಿಗೂ ಪ್ರವೇಶ ಉಚಿತ:
ತೆಲಂಗಾಣ ಸರ್ಕಾರಿ ಶಾಲೆಯ VI ರಿಂದ XII ತರಗತಿಯ ವಿದ್ಯಾರ್ಥಿಗಳನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಹೈದಾರಾಬಾದ್ ಕ್ರಿಕೆಟ್ ಸಂಸ್ಥೆ ಆಹ್ವಾನಿಸಿದೆ. ತಮ್ಮ ಐಡಿ ಕಾರ್ಡ್ ತೋರಿಸಿ ಉಚಿತ ಪ್ರವೇಶ ಪಡೆಯಬಹುದು. ಹಾಗೆಯೇ ಶಾಲಾ ಸಮವಸ್ತ್ರವನ್ನು ಧರಿಸಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸಲಾಗುವುದು ಎಂದು ಹೆಚ್ಸಿಎ ತಿಳಿಸಿದೆ.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…