ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ.
ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್ ಸರಣಿಯಿಂದ ದೂರ ಉಳಿದಿದ್ದಾರೆ.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಉಳಿದ ಪಂದ್ಯಗಳ ಮಾಹಿತಿ:
ಮೂರನೇ ಟೆಸ್ಟ್:
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ರಾಜ್ಕೋಟ್.
ದಿನಾಂಕ: ಫೆಬ್ರವರಿ 15 – 19,
ನಾಲ್ಕನೆ ಟೆಸ್ಟ್:
ಸ್ಥಳ: JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್, ರಾಂಚಿ
ದಿನಾಂಕ: ಫೆಬ್ರವರಿ 23- 27,
ಐದನೇ ಟೆಸ್ಟ್:
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ
ದಿನಾಂಕ: ಮಾರ್ಚ್ 07- 11,
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…