ಕ್ರೀಡೆ

IND vs ENG test series: ಉಳಿದ ಮೂರು ಪಂದ್ಯಗಳಿಗೆ ತಂಡ ಪ್ರಕಟಿಸಿದ ಬಿಸಿಸಿಐ!

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್​ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ.

ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್​ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್​ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್‌ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್​ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್​ಪ್ರೀತ್​ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್‌ ಅಯ್ಯರ್‌ ಸರಣಿಯಿಂದ ದೂರ ಉಳಿದಿದ್ದಾರೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್​ ಕೀಪರ್​), ಕೆಎಸ್ ಭರತ್ (ವಿಕೆಟ್​ ಕೀಪರ್​), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್​ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ನಡುವಿನ ಉಳಿದ ಪಂದ್ಯಗಳ ಮಾಹಿತಿ:

ಮೂರನೇ ಟೆಸ್ಟ್‌:
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್‌ಕೋಟ್.
ದಿನಾಂಕ: ಫೆಬ್ರವರಿ 15 – 19,

ನಾಲ್ಕನೆ ಟೆಸ್ಟ್‌:
ಸ್ಥಳ: JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್, ರಾಂಚಿ
ದಿನಾಂಕ: ಫೆಬ್ರವರಿ 23- 27,

ಐದನೇ ಟೆಸ್ಟ್‌:
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ಧರ್ಮಶಾಲಾ
ದಿನಾಂಕ: ಮಾರ್ಚ್ 07- 11,

andolanait

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

2 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

2 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

2 hours ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago