ಕ್ರೀಡೆ

IND vs ENG test series: ಉಳಿದ ಮೂರು ಪಂದ್ಯಗಳಿಗೆ ತಂಡ ಪ್ರಕಟಿಸಿದ ಬಿಸಿಸಿಐ!

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್​ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ.

ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್​ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್​ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್‌ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್​ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್​ಪ್ರೀತ್​ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್‌ ಅಯ್ಯರ್‌ ಸರಣಿಯಿಂದ ದೂರ ಉಳಿದಿದ್ದಾರೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್​ ಕೀಪರ್​), ಕೆಎಸ್ ಭರತ್ (ವಿಕೆಟ್​ ಕೀಪರ್​), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್​ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ನಡುವಿನ ಉಳಿದ ಪಂದ್ಯಗಳ ಮಾಹಿತಿ:

ಮೂರನೇ ಟೆಸ್ಟ್‌:
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್‌ಕೋಟ್.
ದಿನಾಂಕ: ಫೆಬ್ರವರಿ 15 – 19,

ನಾಲ್ಕನೆ ಟೆಸ್ಟ್‌:
ಸ್ಥಳ: JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್, ರಾಂಚಿ
ದಿನಾಂಕ: ಫೆಬ್ರವರಿ 23- 27,

ಐದನೇ ಟೆಸ್ಟ್‌:
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ಧರ್ಮಶಾಲಾ
ದಿನಾಂಕ: ಮಾರ್ಚ್ 07- 11,

andolanait

Recent Posts

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

4 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

15 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

30 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

40 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

1 hour ago