ಕ್ರೀಡೆ

IND vs ENG test series: ಉಳಿದ ಮೂರು ಪಂದ್ಯಗಳಿಗೆ ತಂಡ ಪ್ರಕಟಿಸಿದ ಬಿಸಿಸಿಐ!

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್​ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ.

ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್​ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್​ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್‌ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್​ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್​ಪ್ರೀತ್​ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್‌ ಅಯ್ಯರ್‌ ಸರಣಿಯಿಂದ ದೂರ ಉಳಿದಿದ್ದಾರೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್​ ಕೀಪರ್​), ಕೆಎಸ್ ಭರತ್ (ವಿಕೆಟ್​ ಕೀಪರ್​), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್​ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ನಡುವಿನ ಉಳಿದ ಪಂದ್ಯಗಳ ಮಾಹಿತಿ:

ಮೂರನೇ ಟೆಸ್ಟ್‌:
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್‌ಕೋಟ್.
ದಿನಾಂಕ: ಫೆಬ್ರವರಿ 15 – 19,

ನಾಲ್ಕನೆ ಟೆಸ್ಟ್‌:
ಸ್ಥಳ: JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್, ರಾಂಚಿ
ದಿನಾಂಕ: ಫೆಬ್ರವರಿ 23- 27,

ಐದನೇ ಟೆಸ್ಟ್‌:
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ಧರ್ಮಶಾಲಾ
ದಿನಾಂಕ: ಮಾರ್ಚ್ 07- 11,

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago