ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ.
ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್ ಸರಣಿಯಿಂದ ದೂರ ಉಳಿದಿದ್ದಾರೆ.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಉಳಿದ ಪಂದ್ಯಗಳ ಮಾಹಿತಿ:
ಮೂರನೇ ಟೆಸ್ಟ್:
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ರಾಜ್ಕೋಟ್.
ದಿನಾಂಕ: ಫೆಬ್ರವರಿ 15 – 19,
ನಾಲ್ಕನೆ ಟೆಸ್ಟ್:
ಸ್ಥಳ: JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್, ರಾಂಚಿ
ದಿನಾಂಕ: ಫೆಬ್ರವರಿ 23- 27,
ಐದನೇ ಟೆಸ್ಟ್:
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ
ದಿನಾಂಕ: ಮಾರ್ಚ್ 07- 11,
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…