ಕ್ರೀಡೆ

IND vs ENG test series: ಸರಣಿ ವೇಳಾಪಟ್ಟಿ, ನೇರ ಪ್ರಸಾರದ ಮಾಹಿತಿ ಇಲ್ಲಿದೆ

ಹೈದರಾಬಾದ್‌: ಬಹು ನಿರೀಕ್ಷಿತ ಆಂಗ್ಲೋ-ಇಂಡಿಯನ್‌ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ದಕ್ಷಿಣ ಆಫ್ರಿಕಾ ಸರಣಿ ಸಮಬಲ ಸಾಧಿಸಿ ತವರಿಗೆ ಮರಳಿರುವ ರೋಹಿತ್‌ ಬಳಗಕ್ಕೆ ಬೆನ್‌ಸ್ಟೋಕ್ಸ್‌ ಸಾರಥ್ಯದ ಇಂಗ್ಲೆಂಡ್‌ ತಂಡ ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಸವಾಲೊಡ್ಡಲಿದೆ.

ಜನವರಿ 25 ರಿಂದ ಆರಂಭವಾಗುವ ಐದು ಟೆಸ್ಟ್‌ ಪಂದ್ಯಗಳ ಸರಣಿ ಮಾರ್ಚ್‌ 11 ಕ್ಕೆ ಮುಕ್ತಾಯಗೊಳ್ಳಲಿದೆ.

ಈ ಆಂಗ್ಲೋ-ಇಂಡಿಯನ್‌ ಸರಣಿಯೂ ಎಲ್ಲಿ?, ಯಾವಾಗ? ಮತ್ತು ಯಾವುದರಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!

ಭಾರತ ಕ್ರಿಕೆಟ್ ತಂಡ ತನ್ನ ಮುಂದಿನ ಸರಣಿಯನ್ನು ಪ್ರವಾಸಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ಐದು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದ್ದು, ಮೊಲದ ಟೆಸ್ಟ್‌ ಪಂದ್ಯ ಜನವರಿ 25 ರಂದು ಆರಂಭವಾಗಲಿದೆ.

ವೇಳಾಪಟ್ಟಿ:

ಮೊದಲ ಪಂದ್ಯ ಜನವರಿ 25-29, ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ
ಎರಡನೇ ಪಂದ್ಯ ಫೆಬ್ರವರಿ 2-6, ವಿಶಾಖಪಟ್ಟಣಂನ ವೈಎಸ್‌ಆರ್‌ ಕ್ರೀಡಾಂಗಣ
ಮೂರನೇ ಪಂದ್ಯ ಫೆ. 15-19, ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣ
ನಾಲ್ಕನೇ ಟೆಸ್ಟ್‌ ಪಂದ್ಯ ಫೆ. 23-27, ರಾಂಚಿಯ ಜೆಎಸ್‌ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣ
ಐದನೇ ಪಂದ್ಯ ಮಾರ್ಚ್ 7-11, ಧರ್ಮಶಾಲಾದ ಹಿಮಾಚಲ ಪ್ರದೇಶ್‌ ಕ್ರಿಕೆಟದದ ಅಸೋಸಿಯೆಷನ್‌ ಕ್ರೀಡಾಂಗಣ

ಸಮಯ: ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿವೆ.

ನೇರಪ್ರಸಾರ: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಟೆಸ್ಟ್‌ ಸರಣಿಯನ್ನು ಜಿಯೋ ಸಿನಿಮಾದಲ್ಲಿ ಲೈವ್‌ ಸ್ಟ್ರೀಮಿಂಗ್‌ ಮತ್ತು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೆಲ್ (ವಿಕೇಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಇಂಗ್ಲೆಂಡ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago