ಕ್ರೀಡೆ

IND vs RSA 1st ODI: ಹರಿಣಗಳ ವಿರುದ್ಧ ರಾಹುಲ್‌ ಪಡೆಗೆ ಭರ್ಜರಿ ಜಯ

ಜೋಹಾನ್ಸ್‌ಬರ್ಗ್: ಇಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ೮ ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ಉತ್ತಮ ಬೌಲಿಂಗ್‌ ಮುಂದೆ ಮಂಕಾದ ಅತಿಥೇಯ ಸೌತ್‌ ಆಫ್ರಿಕಾ ತಂಡ 116 ರನ್‌ಗಳಿಸಿ ಆಲೌಟ್‌ ಆಯಿತು. ಸಾಧಾರಣ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ ೨ ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್‌ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್‌ನಲ್ಲಿಯೇ ವಿಕೆಟ್‌ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆರ್ಶ್‌ದೀಪ್‌ ಸಿಂಗ್‌ ತಮ್ಮ ಮೊಲದನೇ ಓವರ್‌ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್‌ ಶೂನ್ಯಕ್ಕೆ ಔಟ್‌ ಮಾಡಿದರು.

ನಂತರ ಬಂದ ವ್ಯಾನ್‌ ಡುಸೆನ್‌ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್‌ ಗಳಿಸಿದರು. ನಾಯಕ ಮಾರ್ಕ್ರಮ್‌ 12 ರನ್‌ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್‌ ಮಿಲ್ಲರ್‌ ಎರಡು ರನ್‌ ಗಳಿಸಿ ಆವೇಶ್‌ ಖಾನ್‌ಗೆ ವಿಕೆಟ್‌ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್‌ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್‌ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 116 ರನ್‌ಗಳ ಸಾಧಾರಣ ಗುರಿ ನೀಡಿತು.

ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್‌ ದಾಳಿ ಮಾಡಿದ ಆರ್ಶ್‌ದೀಪ್‌ ಸಿಂಗ್‌ 10 ಓವರ್‌ಗಳಲ್ಲಿ 37 ರನ್‌ ನೀಡಿ 5 ವಿಕೆಟ್‌ ಪಡೆದರು. ಇವರಿಗೆ ಸಾಥ್‌ ನೀಡಿದ ಆವೇಶ್‌ ಖಾನ್‌ 27/4 ಮತ್ತು ಕಲ್ದೀಪ್‌ ಯಾದವ್‌ 3/1 ವಿಕೆಟ್‌ ಪಡೆದರು.

ಸಾಧಾರಣ ಮೊತ್ತ ಚೇಸ್‌ ಮಾಡಿದ ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ ಋತುರಾಜ್‌ (೫) ಬೇಗನೆ ಕಳೆದುಕೊಂಡಿತು. ಪಾದಾರ್ಪಣೆ ಪಂದ್ಯ ಆಡಿದ ಸಾಯ್‌ ಸುದರ್ಶನ್‌ ಅವರು ನಿರ್ಭೀತಿಯಿಂದ ಇನ್ನಿಂಗ್ಸ್‌ ಕಟ್ಟಿದರು.೪೩ ಎಸೆತಗಳನ್ನು ಎದುರಿಸಿದ ಅವರು ೯ ಬೌಂಡರಿ ಮೂಲಕ ೫೫ ರನ್‌ ಕಲೆಹಾಕಿದರು. ಇವರಿಗೆ ಜೊತೆಯಾಗಿ ಶ್ರೇಯಸ್‌ ಅಯ್ಯರ್‌ ೫೨ ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು.

ಅಂತಿಮವಾಗಿ ಭಾರತ ತಂಡ ೧೬.೪ ಓವರ್‌ಗಳಲ್ಲಿ ೨ ವಿಕೆಟ್‌ ಕಳೆದುಕೊಂಡು ೧೧೭ ರನ್‌ ಗಳಿಸಿ ಸೀರಿಸ್‌ನ ಮೊಲದ ಜಯ ದಾಖಲಿಸಿತು.

ದಕ್ಷಿಣ ಆಫ್ರಿಕಾ ಪರ ಮುಲ್ಡರ್‌ ಮತ್ತು ಫೆಲುಕ್ವಾಯೊ ತಲಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಆರ್ಶದೀಪ್‌ ಸಿಂಗ್

andolanait

Recent Posts

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

2 mins ago

ಓದುಗರ ಪತ್ರ | ಎಸ್‌ಐಆರ್ ಗೊಂದಲ ಪರಿಹರಿಸಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…

6 mins ago

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

20 hours ago