ಸೆಂಚುರಿಯನ್: ಇಲ್ಲಿನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೆ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ ಸೌಥ್ ಆಫ್ರಿಕಾ ತಂಡ ಗೆಲುವಿನ ಸಿಹಿ ಕಂಡಿದೆ.
ಟೀಂ ಇಂಡಿಯಾ ವಿರುದ್ಧ ತವರು ನೆಲದಲ್ಲಿ ಏಕದಿನ ಸರಣಿ ಸೋತಿದ್ದ ಹರಿಣ ಪಡೆ, ಮೊಲದ ಟೆಸ್ಟ್ನಲ್ಲಿ ಭಾರತ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ನ ಮೂರನೇ ದಿನದಲ್ಲಿ ದಕ್ಷಿಣ ಆಫ್ರಿಕಾ ತಂಡ 408 ಪೇರಿಸಿ ಟೀಂ ಇಂಡಿಯಾಗೆ 163 ರನ್ ಗಳ ಟ್ರಯಲ್ ನೀಡಿತು. ಅದರಂತೆ ಎರಡನೇ ಇನ್ನಿಂಗ್ಸ್ಗೆ ಬ್ಯಾಟ್ ಮಾಡಲು ಬಂದ ಟೀಂ ಇಂಡಿಯಾ ಆರಂಭದಿಂದಲೇ ಕುಸಿತ ಅನುಭವಿಸಿತು. ಸತತ ಎರಡನೇ ಇನ್ನಿಂಗ್ಸ್ ನಲ್ಲಿಯೂ ರಬಾಡ ಎಸೆತಕ್ಕೆ ಕ್ಷೀನ್ ಬೋಲ್ಡ್ ಆಗುವ ಮೂಲಕ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಓಟಾಗಿ ಹೊರನಡೆದರು. ಯಶಸ್ವಿ ಜೈಸ್ವಾಲ್ (5) ಕೂಡಾ ಹೆಚ್ಚುಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ.
ವಿರಾಟ್ ಕೊಹ್ಲಿ (76) ಜಾಗೃತಿಯ ಆಟವಾಡಿದರು ಸಹಾ ತಂಡವನ್ನು ಸಂಕಷ್ಟದಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಶುಭಮನ್ ಗಿಲ್ (26) ಹೊರತುಪಡಿಸಿ ಟೀಂ ಇಂಡಿಯಾದ ಬೇರೊಬ್ಬ ಆಟಗಾರರು ಎರಡಂಕಿ ದಾಟಲಿಲ್ಲ. ಅಂತಿಮವಾಗಿ ಭಾರತ ತಂಡ 34.1 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 131 ಗಳಿಸಿ 32 ರನ್ ಹಾಗೂ ಇನ್ನಿಂಗ್ಸ್ ಸೋಲು ಅನುಭವಿಸಿತು.
ಇತ್ತ ಪ್ರಬಲ ಬೌಲಿಂಗ್ ದಾಳಿ ನಡೆಸಿದ ಆಫ್ರಿಕಾ ತಂಡದ ಪರ ಕಗಿಸೋ ರಬಾಡ 2, ಬರ್ಜರ್ 4 ಮತ್ತು ಮಾರ್ಕೋ ಎನ್ಸನ್ 3 ವಿಕೆಟ್ ಕಬಳಿಸಿದರು.
ಆ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕನಸು ಕನಸಾಗಿಯೇ ಉಳಿಯಿತು.
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ 245 ರನ್ ಗಳಿಗೆ ಸರ್ವಪತನ ಕಂಡಿತ್ತು. ಎರಡನೇ ದಿನದಾಟದ ಅಂತ್ಯಕ್ಕೆ ಹರಿಣ ಪಡೆ 5 ವಿಕೆಟ್ಗೆ 266 ರನ್ ಗಳಿಸಿ 11ರನ್ ಗಳ ಮುನ್ನಡೆ ಕಾಯುಕೊಂಡು ಮೂರನೇ ದಿನಕ್ಕೆ ಕಾಲಿಟ್ಟಿತು.
ಇಂದು ಭಾರತ ತಂಡದ ದಿಟ್ಟ ಬೌಲಿಂಗ್ ಪಡೆ 138 ರನ್ ಗಳಿಗೆ ಹರಿಣ ಪಡೆಯನ್ನು ಕಟ್ಟಿಹಾಕಿತು. ಸೌಥ್ ಆಫ್ರಿಕಾ ಪರ ಡೀನ್ ಎಲ್ಗರ್ 185 ರನ್ ಗಳಿಸಿದರು. ಇನ್ನು ಆಲ್ರೌಂಡರ್ ಮಾರ್ಕೊ ಎನ್ಸೆನ್ 84 ರನ್ ಗಳಿಸಿ ಭಾರತ ಬೌಲರ್ ಗಳನ್ನು ಕಾಡಿದರು. ಬೇರೆ ಯಾರಿಂದಲೂ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 108.4 ಓವರ್ಗಳಲ್ಲಿ 408 ರನ್ ಗಳಿಸಿ ಸರ್ವಪತನ ಕಂಡಿತು. ಭಾರತಕ್ಕೆ 163 ರನ್ ಗಳ ಟ್ರಯಲ್ ನೀಡಿತು.
ಟೀಂ ಇಂಡಿಯಾ ಪರ ಬುಮ್ರಾ 4 ವಿಕೆಟ್ ಪಡೆದು ಮಿಂಚಿದರು. ಸಿರಾಜ್ ಎರಡು ವಿಕೆಟ್ ಪಡೆದರೇ, ಅಶ್ವಿನ್, ಠಾಕೂರ್ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಡೀನ್ ಎಲ್ಗರ್
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್: ಕೆ.ಎಲ್ ರಾಹುಲ್ (101), ವಿರಾಟ್ ಕೊಹ್ಲಿ (38), ಶ್ರೇಯಸ್ ಅಯ್ಯರ್ (34); ರಬಾಡ 59/5, ಬರ್ಜರ್50/3
ದ. ಆಫ್ರಿಕಾ ಮೊದಲ ಇನ್ನಿಂಗ್ಸ್: ಡೀನ್ ಎಲ್ಗರ್ (185), ಮಾರ್ಕೋ ಎನ್ಸನ್ (84); ಬುಮ್ರಾ 69/4, ಸಿರಾಜ್ 91/2
ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್: ವಿರಾಟ್ ಕೊಹ್ಲಿ (76), ಶುಭ್ಮನ್ ಗಿಲ್ (26); ರಬಾಡ 32/2, ಬರ್ಜರ್ 33/4, ಎನ್ಸನ್ 36/3
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…