ಕ್ರೀಡೆ

IND vs RSA 1st test: ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌; 408ಕ್ಕೆ ಸರ್ವಪತನ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ ಪಂದ್ಯ ಮೂರನೇ ದಿನದಲ್ಲಿ ದಕ್ಷಿಣ ಆಫ್ರಿಕಾ ತಂಡ 408 ಪೇರಿಸಿ ಟೀಂ ಇಂಡಿಯಾಗೆ 163 ರನ್‌ ಗಳ ಟ್ರಯಲ್‌ ನೀಡಿದೆ.

ಇಲ್ಲಿನ ಸೂಪರ್‌ ಸ್ಪೋರ್ಟ್ಸ್‌ ಪಾರ್ಕ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಕ್ಸಿಂಗ್‌ ಡೆ ಟೆಸ್ಟ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೌಥ್‌ ಆಫ್ರಿಕಾ ತಂಡ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ ಗಳಿಗೆ ಸರ್ವಪತನ ಕಂಡಿತ್ತು. ಎರಡನೇ ದಿನದಾಟದ ಅಂತ್ಯಕ್ಕೆ ಹರಿಣ ಪಡೆ 5 ವಿಕೆಟ್‌ಗೆ 266 ರನ್‌ ಗಳಿಸಿ 11ರನ್‌ ಗಳ ಮುನ್ನಡೆ ಕಾಯುಕೊಂಡು ಮೂರನೇ ದಿನಕ್ಕೆ ಕಾಲಿಟ್ಟಿತು.

ಇಂದು ಭಾರತ ತಂಡದ ದಿಟ್ಟ ಬೌಲಿಂಗ್‌ ಪಡೆ 138 ರನ್‌ ಗಳಿಗೆ ಹರಿಣ ಪಡೆಯನ್ನು ಕಟ್ಟಿಹಾಕಿತು. ಸೌಥ್‌ ಆಫ್ರಿಕಾ ಪರ ಡೀನ್‌ ಎಲ್ಗರ್‌ 185 ರನ್‌ ಗಳಿಸಿದರು. ಇನ್ನು ಆಲ್‌ರೌಂಡರ್‌ ಮಾರ್ಕೊ ಎನ್ಸೆನ್‌ 84 ರನ್‌ ಗಳಿಸಿ ಭಾರತ ಬೌಲರ್‌ ಗಳನ್ನು ಕಾಡಿದರು. ಬೇರೆ ಯಾರಿಂದಲೂ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 108.4 ಓವರ್‌ಗಳಲ್ಲಿ 408 ರನ್‌ ಗಳಿಸಿ ಸರ್ವಪತನ ಕಂಡಿತು. ಭಾರತಕ್ಕೆ 163 ರನ್‌ ಗಳ ಟ್ರಯಲ್‌ ನೀಡಿತು.

ಟೀಂ ಇಂಡಿಯಾ ಪರ ಬುಮ್ರಾ 4 ವಿಕೆಟ್‌ ಪಡೆದು ಮಿಂಚಿದರು. ಸಿರಾಜ್‌ ಎರಡು ವಿಕೆಟ್‌ ಪಡೆದರೇ, ಅಶ್ವಿನ್‌, ಠಾಕೂರ್‌ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್‌ ಪಡೆದರು.

ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದು, 16.2 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 17 ರನ್‌ ಬಾರಿಸಿ ಬ್ಯಾಟಿಂಗ್‌ ಆಡುತ್ತಿದೆ. ಕಗಿಸೋ ರಬಾಡ ಮತ್ತು ಬರ್ಜರ್‌ ಒಂದೊಂದು ವಿಕೆಟ್‌ ಪಡೆದಿದ್ದಾರೆ.

andolanait

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

29 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago