ಕ್ರೀಡೆ

IND vs RSA 1st test: ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌; 408ಕ್ಕೆ ಸರ್ವಪತನ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ ಪಂದ್ಯ ಮೂರನೇ ದಿನದಲ್ಲಿ ದಕ್ಷಿಣ ಆಫ್ರಿಕಾ ತಂಡ 408 ಪೇರಿಸಿ ಟೀಂ ಇಂಡಿಯಾಗೆ 163 ರನ್‌ ಗಳ ಟ್ರಯಲ್‌ ನೀಡಿದೆ.

ಇಲ್ಲಿನ ಸೂಪರ್‌ ಸ್ಪೋರ್ಟ್ಸ್‌ ಪಾರ್ಕ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಕ್ಸಿಂಗ್‌ ಡೆ ಟೆಸ್ಟ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೌಥ್‌ ಆಫ್ರಿಕಾ ತಂಡ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ ಗಳಿಗೆ ಸರ್ವಪತನ ಕಂಡಿತ್ತು. ಎರಡನೇ ದಿನದಾಟದ ಅಂತ್ಯಕ್ಕೆ ಹರಿಣ ಪಡೆ 5 ವಿಕೆಟ್‌ಗೆ 266 ರನ್‌ ಗಳಿಸಿ 11ರನ್‌ ಗಳ ಮುನ್ನಡೆ ಕಾಯುಕೊಂಡು ಮೂರನೇ ದಿನಕ್ಕೆ ಕಾಲಿಟ್ಟಿತು.

ಇಂದು ಭಾರತ ತಂಡದ ದಿಟ್ಟ ಬೌಲಿಂಗ್‌ ಪಡೆ 138 ರನ್‌ ಗಳಿಗೆ ಹರಿಣ ಪಡೆಯನ್ನು ಕಟ್ಟಿಹಾಕಿತು. ಸೌಥ್‌ ಆಫ್ರಿಕಾ ಪರ ಡೀನ್‌ ಎಲ್ಗರ್‌ 185 ರನ್‌ ಗಳಿಸಿದರು. ಇನ್ನು ಆಲ್‌ರೌಂಡರ್‌ ಮಾರ್ಕೊ ಎನ್ಸೆನ್‌ 84 ರನ್‌ ಗಳಿಸಿ ಭಾರತ ಬೌಲರ್‌ ಗಳನ್ನು ಕಾಡಿದರು. ಬೇರೆ ಯಾರಿಂದಲೂ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 108.4 ಓವರ್‌ಗಳಲ್ಲಿ 408 ರನ್‌ ಗಳಿಸಿ ಸರ್ವಪತನ ಕಂಡಿತು. ಭಾರತಕ್ಕೆ 163 ರನ್‌ ಗಳ ಟ್ರಯಲ್‌ ನೀಡಿತು.

ಟೀಂ ಇಂಡಿಯಾ ಪರ ಬುಮ್ರಾ 4 ವಿಕೆಟ್‌ ಪಡೆದು ಮಿಂಚಿದರು. ಸಿರಾಜ್‌ ಎರಡು ವಿಕೆಟ್‌ ಪಡೆದರೇ, ಅಶ್ವಿನ್‌, ಠಾಕೂರ್‌ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್‌ ಪಡೆದರು.

ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದು, 16.2 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 17 ರನ್‌ ಬಾರಿಸಿ ಬ್ಯಾಟಿಂಗ್‌ ಆಡುತ್ತಿದೆ. ಕಗಿಸೋ ರಬಾಡ ಮತ್ತು ಬರ್ಜರ್‌ ಒಂದೊಂದು ವಿಕೆಟ್‌ ಪಡೆದಿದ್ದಾರೆ.

andolanait

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

17 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

22 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

26 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

31 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

33 mins ago