ಕ್ರೀಡೆ

IND vs RSA 1st test: ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌; 408ಕ್ಕೆ ಸರ್ವಪತನ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ ಪಂದ್ಯ ಮೂರನೇ ದಿನದಲ್ಲಿ ದಕ್ಷಿಣ ಆಫ್ರಿಕಾ ತಂಡ 408 ಪೇರಿಸಿ ಟೀಂ ಇಂಡಿಯಾಗೆ 163 ರನ್‌ ಗಳ ಟ್ರಯಲ್‌ ನೀಡಿದೆ.

ಇಲ್ಲಿನ ಸೂಪರ್‌ ಸ್ಪೋರ್ಟ್ಸ್‌ ಪಾರ್ಕ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಕ್ಸಿಂಗ್‌ ಡೆ ಟೆಸ್ಟ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೌಥ್‌ ಆಫ್ರಿಕಾ ತಂಡ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ ಗಳಿಗೆ ಸರ್ವಪತನ ಕಂಡಿತ್ತು. ಎರಡನೇ ದಿನದಾಟದ ಅಂತ್ಯಕ್ಕೆ ಹರಿಣ ಪಡೆ 5 ವಿಕೆಟ್‌ಗೆ 266 ರನ್‌ ಗಳಿಸಿ 11ರನ್‌ ಗಳ ಮುನ್ನಡೆ ಕಾಯುಕೊಂಡು ಮೂರನೇ ದಿನಕ್ಕೆ ಕಾಲಿಟ್ಟಿತು.

ಇಂದು ಭಾರತ ತಂಡದ ದಿಟ್ಟ ಬೌಲಿಂಗ್‌ ಪಡೆ 138 ರನ್‌ ಗಳಿಗೆ ಹರಿಣ ಪಡೆಯನ್ನು ಕಟ್ಟಿಹಾಕಿತು. ಸೌಥ್‌ ಆಫ್ರಿಕಾ ಪರ ಡೀನ್‌ ಎಲ್ಗರ್‌ 185 ರನ್‌ ಗಳಿಸಿದರು. ಇನ್ನು ಆಲ್‌ರೌಂಡರ್‌ ಮಾರ್ಕೊ ಎನ್ಸೆನ್‌ 84 ರನ್‌ ಗಳಿಸಿ ಭಾರತ ಬೌಲರ್‌ ಗಳನ್ನು ಕಾಡಿದರು. ಬೇರೆ ಯಾರಿಂದಲೂ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 108.4 ಓವರ್‌ಗಳಲ್ಲಿ 408 ರನ್‌ ಗಳಿಸಿ ಸರ್ವಪತನ ಕಂಡಿತು. ಭಾರತಕ್ಕೆ 163 ರನ್‌ ಗಳ ಟ್ರಯಲ್‌ ನೀಡಿತು.

ಟೀಂ ಇಂಡಿಯಾ ಪರ ಬುಮ್ರಾ 4 ವಿಕೆಟ್‌ ಪಡೆದು ಮಿಂಚಿದರು. ಸಿರಾಜ್‌ ಎರಡು ವಿಕೆಟ್‌ ಪಡೆದರೇ, ಅಶ್ವಿನ್‌, ಠಾಕೂರ್‌ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್‌ ಪಡೆದರು.

ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದು, 16.2 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 17 ರನ್‌ ಬಾರಿಸಿ ಬ್ಯಾಟಿಂಗ್‌ ಆಡುತ್ತಿದೆ. ಕಗಿಸೋ ರಬಾಡ ಮತ್ತು ಬರ್ಜರ್‌ ಒಂದೊಂದು ವಿಕೆಟ್‌ ಪಡೆದಿದ್ದಾರೆ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

4 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

4 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

5 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

5 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago