ಕ್ರೀಡೆ

IND vs RSA 1st test: ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌; 408ಕ್ಕೆ ಸರ್ವಪತನ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ ಪಂದ್ಯ ಮೂರನೇ ದಿನದಲ್ಲಿ ದಕ್ಷಿಣ ಆಫ್ರಿಕಾ ತಂಡ 408 ಪೇರಿಸಿ ಟೀಂ ಇಂಡಿಯಾಗೆ 163 ರನ್‌ ಗಳ ಟ್ರಯಲ್‌ ನೀಡಿದೆ.

ಇಲ್ಲಿನ ಸೂಪರ್‌ ಸ್ಪೋರ್ಟ್ಸ್‌ ಪಾರ್ಕ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಕ್ಸಿಂಗ್‌ ಡೆ ಟೆಸ್ಟ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೌಥ್‌ ಆಫ್ರಿಕಾ ತಂಡ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ ಗಳಿಗೆ ಸರ್ವಪತನ ಕಂಡಿತ್ತು. ಎರಡನೇ ದಿನದಾಟದ ಅಂತ್ಯಕ್ಕೆ ಹರಿಣ ಪಡೆ 5 ವಿಕೆಟ್‌ಗೆ 266 ರನ್‌ ಗಳಿಸಿ 11ರನ್‌ ಗಳ ಮುನ್ನಡೆ ಕಾಯುಕೊಂಡು ಮೂರನೇ ದಿನಕ್ಕೆ ಕಾಲಿಟ್ಟಿತು.

ಇಂದು ಭಾರತ ತಂಡದ ದಿಟ್ಟ ಬೌಲಿಂಗ್‌ ಪಡೆ 138 ರನ್‌ ಗಳಿಗೆ ಹರಿಣ ಪಡೆಯನ್ನು ಕಟ್ಟಿಹಾಕಿತು. ಸೌಥ್‌ ಆಫ್ರಿಕಾ ಪರ ಡೀನ್‌ ಎಲ್ಗರ್‌ 185 ರನ್‌ ಗಳಿಸಿದರು. ಇನ್ನು ಆಲ್‌ರೌಂಡರ್‌ ಮಾರ್ಕೊ ಎನ್ಸೆನ್‌ 84 ರನ್‌ ಗಳಿಸಿ ಭಾರತ ಬೌಲರ್‌ ಗಳನ್ನು ಕಾಡಿದರು. ಬೇರೆ ಯಾರಿಂದಲೂ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 108.4 ಓವರ್‌ಗಳಲ್ಲಿ 408 ರನ್‌ ಗಳಿಸಿ ಸರ್ವಪತನ ಕಂಡಿತು. ಭಾರತಕ್ಕೆ 163 ರನ್‌ ಗಳ ಟ್ರಯಲ್‌ ನೀಡಿತು.

ಟೀಂ ಇಂಡಿಯಾ ಪರ ಬುಮ್ರಾ 4 ವಿಕೆಟ್‌ ಪಡೆದು ಮಿಂಚಿದರು. ಸಿರಾಜ್‌ ಎರಡು ವಿಕೆಟ್‌ ಪಡೆದರೇ, ಅಶ್ವಿನ್‌, ಠಾಕೂರ್‌ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್‌ ಪಡೆದರು.

ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದು, 16.2 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 17 ರನ್‌ ಬಾರಿಸಿ ಬ್ಯಾಟಿಂಗ್‌ ಆಡುತ್ತಿದೆ. ಕಗಿಸೋ ರಬಾಡ ಮತ್ತು ಬರ್ಜರ್‌ ಒಂದೊಂದು ವಿಕೆಟ್‌ ಪಡೆದಿದ್ದಾರೆ.

andolanait

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago