ಕ್ರೀಡೆ

IND vs RSA 1st test: ಟಾಸ್‌ ವರದಿ, ಆಡುವ ಬಳಗದ ಮಾಹಿತಿ

ಸೆಂಚುರಿಯನ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್‌ ಪಂದ್ಯದಲ್ಲಿ ಡಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್‌ ಆಯ್ದುಕೊಂಡಿದೆ.

ಇಲ್ಲಿನ ಸೆಂಚುರಿಯನ್​ನಲ್ಲಿನ ಸೂಪರ್​ಸ್ಪೋರ್ಟ್​ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಭಾರತದ ಪರ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ. ಫಿಟ್​ನೆಸ್ ಸಮಸ್ಯೆಯ ಕಾರಣ ಜಡ್ಡು ಹೊರಗುಳಿದಿದ್ದು, ಅವರ ಬದಲಿಗೆ ಶಾರ್ದೂಲ್ ಠಾಕೂರ್​ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ಪರ ಈ ಪಂದ್ಯದಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಝೋರ್ಝಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಝಿ, ಕಗಿಸೊ ರಬಾಡ, ನಾಂಡ್ರೆ ಬರ್ಗರ್.

ಈವರೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 42 ಬಾರಿ ಮುಖಾಮುಖಿಯಾಗಿದ್ದು, ಭಾರತ 15 ಪಂದ್ಯ ಗೆದ್ದರೇ, ಸೌಥ್‌ ಆಫ್ರಿಕಾ 17 ಬಾರಿ ಜಯಗಳಿಸಿದೆ. 10 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.

andolanait

Recent Posts

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

25 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

4 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

4 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

4 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

5 hours ago