ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನುಡವಿನ ಮೊದಲ ಟೆಸ್ಟ್ ಪಂದ್ಯ ಇಂದು ಆರಂಭವಾಗಲಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ನೆಲದಲ್ಲಿ ಮಾತ್ರ ಈವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. ಇದೀಗ ಇತಿಹಾಸ ಸೃಷ್ಟಿಸಲು ಹೊರಟಿರುವ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಇಂದು ಇಂಡೋ-ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯ ಸೆಂಚುರಿಯನ್ನ ಸೂಪರ್ ಸ್ಪೋರ್ಟ್ಸ್ ಪಾರ್ಕ್ನಲ್ಲಿ ಇಂದು (ಮಂಗಳವಾರ) ಮದ್ಯಾಹ್ನ 1.30ಕ್ಕೆ ನಡೆಯಲಿದೆ.
ತವರು ನೆಲದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಈವರೆಗೆ ಒಂದೇ ಒಂದು ಟೆಸ್ಟ್ ಸರಣಿ ಸೋಲದ ದಕ್ಷಿಣ ಆಫ್ರಿಕಾ ತಂಡಕ್ಕೆ ರೋಹಿತ್ ಬಳಗ ಸೋಲಿನ ಕಹಿ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಆದರೆ, ಸೆಂಚುರಿಯನ್ ಹವಾಮಾನವು ಈ ಟೆಸ್ಟ್ ಪಂದ್ಯಕ್ಕೆ ಅಡ್ಡಿ ಪಡಿಸುವುದು ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಆಫ್ರಿಕಾದ ಈ ನಗರದಲ್ಲಿ ಹವಾಮಾನವು ಸ್ಪಷ್ಟ ಮತ್ತು ಬಿಸಿಲಿನಿಂದ ಕೂಡಿದೆ. ಆದರೆ ಮಂಗಳವಾರದಂದು, ಪಂದ್ಯ ಆರಂಭವಾಗುವ ದಿನ ಹವಾಮಾನವು ಫೌಲ್ ಎಂದು ಹೇಳಲಾಗುತ್ತದೆ.
ಅಕ್ಯುವೆದರ್ನ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 26 ರಂದು ಸೆಂಚುರಿಯನ್ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಸಾಧ್ಯತೆ ಶೇಕಡಾ 96 ರಷ್ಟಿದೆ. ಪಿಟಿಐ ಜೊತೆ ಮಾತನಾಡಿದ ಕ್ಯುರೇಟರ್ ಬ್ಲೋಯ್, ಮುಂದಿನ ದಿನಗಳಲ್ಲಿ ತಾಪಮಾನವು 20 ಡಿಗ್ರಿಗಳಿಗೆ ಇಳಿಯಬಹುದು ಮತ್ತು ಮೊದಲ ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ಪಿಚ್ ರಿಪೋರ್ಟ್:
ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿನ ಪಿಚ್ ಕಠಿಣವಾಗಿದ್ದು ವೇಗ ಮತ್ತು ಬೌನ್ಸಿಯಾಗಿದೆ. ಇದು ದಕ್ಷಿಣ ಆಫ್ರಿಕಾದಲ್ಲಿ ಅತ್ಯಂತ ವೇಗವಾದ ಪಿಚ್ ಎಂದು ಲೇಬಲ್ ಮಾಡಲಾಗಿದೆ. ಪಿಚ್ ಬೌಲರ್ಗಳಿಗೆ (ವಿಶೇಷವಾಗಿ ವೇಗಿಗಳಿಗೆ) ಹೆಚ್ಚು ಅನುಕೂಲಕರವಾಗಿದ್ದು, ಬ್ಯಾಟರ್ಗಳು ಅಲ್ಪ ಮಟ್ಟಿಗೆ ಯಶಸ್ಸು ಸಾಧಿಸುತ್ತಾರೆ. ಇಲ್ಲಿ ಸ್ಪಿನ್ನರ್ಗಳು ಎಂದಿಗೂ ಉತ್ತಮ ಪ್ರದರ್ಶನ ನೀಡಿಲ್ಲ.
ಈ ಪಿಚ್ನಲ್ಲಿ ಮೊದಲ ಇನ್ನಿಂಗ್ಸ್ನ ಸರಾಸರಿ ಸ್ಕೋರ್ 330 ಆಗಿದೆ. ಇಲ್ಲಿ ಬ್ಯಾಟ್ ಮಾಡಲು ಮೊದಲ ಇನ್ನಿಂಗ್ಸ್ ಸಹಾಯ ಮಾಡುತ್ತದೆ. ನಾಲ್ಕನೇ ಇನ್ನಿಂಗ್ಸ್ನಲ್ಲಿ ಚೇಸಿಂಗ್ ಅತ್ಯಂತ ಕಷ್ಟಕರವಾಗಿದೆ. ಇಲ್ಲಿ ಆಡಿದ 28 ಪಂದ್ಯಗಳಲ್ಲಿ ಯಾವುದೇ ತಂಡವು ಇಲ್ಲಿಯವರೆಗೆ 250 ಅಥವಾ ಅದಕ್ಕಿಂತ ಹೆಚ್ಚಿನ ರನ್ಗಳ ಗುರಿಯನ್ನು ಬೆನ್ನಟ್ಟಿಲ್ಲ.
ಈವರೆಗೆ ಭಾರತ ತಂಡ ಪರವಾಗಿ ಆಫ್ರಿಕಾ ನೆಲದಲ್ಲಿ ರಾಹುಲ್ ದ್ರಾವಿಡ್, ಎಂ ಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ತಲಾ ಒಂದೊಂದು ಪಂದ್ಯಗಳನ್ನು ಮಾತ್ರ ಗೆದ್ದಿದ್ದಾರೆ. ಯಾರಿಂದಲೂ ಸರಣಿ ಗೆಲ್ಲಲ್ಲು ಆಗಿಲ್ಲ. ಈ ದಾಖಲೆಯನ್ನು ರೋಹಿತ್ ಸರಿಗಟ್ಟಿ ಮೊದಲ ಬಾರಿಗೆ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…