ಕ್ರೀಡೆ

IND vs RSA 1st test: ಟೀಂ ಇಂಡಿಯಾಗೆ ಅಫ್ರಿಕಾ ನೆಲದಲ್ಲಿ ಸರಣಿ ಜಯದ ಕನಸು ನನಸಾಗಲಿದೆಯಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನುಡವಿನ ಮೊದಲ ಟೆಸ್ಟ್‌ ಪಂದ್ಯ ಇಂದು ಆರಂಭವಾಗಲಿದೆ. ಟೆಸ್ಟ್ ಕ್ರಿಕೆಟ್​ನಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ನೆಲದಲ್ಲಿ ಮಾತ್ರ ಈವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. ಇದೀಗ ಇತಿಹಾಸ ಸೃಷ್ಟಿಸಲು ಹೊರಟಿರುವ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಇಂದು ಇಂಡೋ-ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯ ಸೆಂಚುರಿಯನ್​ನ ಸೂಪರ್ ಸ್ಪೋರ್ಟ್ಸ್ ಪಾರ್ಕ್​ನಲ್ಲಿ ಇಂದು (ಮಂಗಳವಾರ) ಮದ್ಯಾಹ್ನ 1.30ಕ್ಕೆ ನಡೆಯಲಿದೆ.

ತವರು ನೆಲದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಈವರೆಗೆ ಒಂದೇ ಒಂದು ಟೆಸ್ಟ್‌ ಸರಣಿ ಸೋಲದ ದಕ್ಷಿಣ ಆಫ್ರಿಕಾ ತಂಡಕ್ಕೆ ರೋಹಿತ್‌ ಬಳಗ ಸೋಲಿನ ಕಹಿ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಆದರೆ, ಸೆಂಚುರಿಯನ್ ಹವಾಮಾನವು ಈ ಟೆಸ್ಟ್ ಪಂದ್ಯಕ್ಕೆ ಅಡ್ಡಿ ಪಡಿಸುವುದು ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಆಫ್ರಿಕಾದ ಈ ನಗರದಲ್ಲಿ ಹವಾಮಾನವು ಸ್ಪಷ್ಟ ಮತ್ತು ಬಿಸಿಲಿನಿಂದ ಕೂಡಿದೆ. ಆದರೆ ಮಂಗಳವಾರದಂದು, ಪಂದ್ಯ ಆರಂಭವಾಗುವ ದಿನ ಹವಾಮಾನವು ಫೌಲ್ ಎಂದು ಹೇಳಲಾಗುತ್ತದೆ.

ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಸಾಧ್ಯತೆ ಶೇಕಡಾ 96 ರಷ್ಟಿದೆ. ಪಿಟಿಐ ಜೊತೆ ಮಾತನಾಡಿದ ಕ್ಯುರೇಟರ್ ಬ್ಲೋಯ್, ಮುಂದಿನ ದಿನಗಳಲ್ಲಿ ತಾಪಮಾನವು 20 ಡಿಗ್ರಿಗಳಿಗೆ ಇಳಿಯಬಹುದು ಮತ್ತು ಮೊದಲ ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

ಪಿಚ್‌ ರಿಪೋರ್ಟ್‌:
ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿನ ಪಿಚ್ ಕಠಿಣವಾಗಿದ್ದು ವೇಗ ಮತ್ತು ಬೌನ್ಸಿಯಾಗಿದೆ. ಇದು ದಕ್ಷಿಣ ಆಫ್ರಿಕಾದಲ್ಲಿ ಅತ್ಯಂತ ವೇಗವಾದ ಪಿಚ್ ಎಂದು ಲೇಬಲ್ ಮಾಡಲಾಗಿದೆ. ಪಿಚ್ ಬೌಲರ್‌ಗಳಿಗೆ (ವಿಶೇಷವಾಗಿ ವೇಗಿಗಳಿಗೆ) ಹೆಚ್ಚು ಅನುಕೂಲಕರವಾಗಿದ್ದು, ಬ್ಯಾಟರ್‌ಗಳು ಅಲ್ಪ ಮಟ್ಟಿಗೆ ಯಶಸ್ಸು ಸಾಧಿಸುತ್ತಾರೆ. ಇಲ್ಲಿ ಸ್ಪಿನ್ನರ್‌ಗಳು ಎಂದಿಗೂ ಉತ್ತಮ ಪ್ರದರ್ಶನ ನೀಡಿಲ್ಲ.

ಈ ಪಿಚ್​ನಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 330 ಆಗಿದೆ. ಇಲ್ಲಿ ಬ್ಯಾಟ್ ಮಾಡಲು ಮೊದಲ ಇನ್ನಿಂಗ್ಸ್‌ ಸಹಾಯ ಮಾಡುತ್ತದೆ. ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಚೇಸಿಂಗ್ ಅತ್ಯಂತ ಕಷ್ಟಕರವಾಗಿದೆ. ಇಲ್ಲಿ ಆಡಿದ 28 ಪಂದ್ಯಗಳಲ್ಲಿ ಯಾವುದೇ ತಂಡವು ಇಲ್ಲಿಯವರೆಗೆ 250 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಗುರಿಯನ್ನು ಬೆನ್ನಟ್ಟಿಲ್ಲ.

ಈವರೆಗೆ ಭಾರತ ತಂಡ ಪರವಾಗಿ ಆಫ್ರಿಕಾ ನೆಲದಲ್ಲಿ ರಾಹುಲ್‌ ದ್ರಾವಿಡ್‌, ಎಂ ಎಸ್‌ ಧೋನಿ ಮತ್ತು ವಿರಾಟ್‌ ಕೊಹ್ಲಿ ಅವರು ತಲಾ ಒಂದೊಂದು ಪಂದ್ಯಗಳನ್ನು ಮಾತ್ರ ಗೆದ್ದಿದ್ದಾರೆ. ಯಾರಿಂದಲೂ ಸರಣಿ ಗೆಲ್ಲಲ್ಲು ಆಗಿಲ್ಲ. ಈ ದಾಖಲೆಯನ್ನು ರೋಹಿತ್‌ ಸರಿಗಟ್ಟಿ ಮೊದಲ ಬಾರಿಗೆ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

6 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

7 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

7 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

8 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

9 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

9 hours ago