ಕ್ರೀಡೆ

IND vs RSA 3rd T20: ಭಾರತಕ್ಕೆ ಭರ್ಜರಿ ಜಯ; ಸರಣಿ ಸಮ

ಜೋಹಾನ್ಸ್‌ಬರ್ಗ್ : ಸೂರ್ಯ ಶತಕದಾಟ ಮತ್ತು ಕುಲದೀಪ್ ಯಾದವ್ ಅವರ ಅಮೋಘ ದಾಳಿಯ ನೆರವಿನಿಂದ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸಮಬಲ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದ್ದ ಪಂದ್ಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅಮೋಘ ಶತಕ ಸಿಡಿಸಿದರೆ, ಇತ್ತ ಬೌಲಿಂಗ್ ನಲ್ಲಿ ಅಮೋಘ ಪ್ರದರ್ಶನ ತೋರಿದ ಕುಲದೀಪ್ ಹರಿಣಗಳನ್ನು ಕಟ್ಟಿಹಾಕುವ ಮೂಲಕ ಸರಣಿ ಸಮಬಲ ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ, ಯಶಸ್ವಿ ಜೈಸ್ವಾಲ್ 60(41ಎಸೆತ) ರನ್ ಗಳಿಸಿ ಔಟಾದರು. ಶುಭಮನ್ ಗಿಲ್ 12, ತಿಲಕ್ ವರ್ಮ ಶೂನ್ಯಕ್ಕೆ ಔಟಾದರು. ಅಮೋಘ ಆಟವಾಡಿ ಅಬ್ಬರಿಸಿದ ಸೂರ್ಯ 56 ಎಸೆತಗಳಲ್ಲಿ100 ರನ್ ಪೂರ್ಣ ಗಳಿಸಿ ಔಟಾದರು. 7 ಬೌಂಡರಿ ಮತ್ತು 8 ಭರ್ಜರಿ ಸಿಕ್ಸರ್ ಸಿಡಿಸಿದರು. ರಿಂಕು ಸಿಂಗ್ 14 ರನ್ ಗಳಿಸಿ ಔಟಾದರು.

ಅಂತಿಮವಾಗಿ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ 202 ರನ್ ಗಳ ಸವಾಲು ನೀಡಿತು.

ಕೇಶವ ಮಹಾರಾಜ್ ಮತ್ತು ಲಿಜಾಡ್ ವಿಲಿಯಮ್ಸ್ ತಲಾ 2 ವಿಕೆಟ್ ಪಡೆದರು. ನಾಂದ್ರೆ ಬರ್ಗರ್,ತಬ್ರೈಜ್ ಶಮ್ಸಿ ತಲಾ ಒಂದು ವಿಕೆಟ್ ಪಡೆದರು.

ಈ ಬೃಹತ್ ಮೊತ್ತ ಚೇಸ್ ಮಾಡಲು ಮುಂದಾದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರು. ರೀಜಾ ಹೆಂಡ್ರಿಕ್ಸ್ 8, ಮ್ಯಾಥ್ಯ ಬ್ರಿಟ್ಟಿ 4 ರನ್ ಗಳಿಸಿ ಪೆವಿಲಿಯನ್ ಸೇರಿದರು.

ನಾಯಕ ಮರ್ಕ್ರಂ 25, ಡೇವಿಡ್ ಮಿಲ್ಲರ್ 35 ತಂಡಕ್ಕೆ ಚೇತರಿಕೆ ನೀಡಲು ಹೊರಟರು. ಆದ್ರೆ ಅವರ ಪ್ರಯತ್ನ ವಿಫಲವಾಯಿತು. ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಮುಂದೆ ಮಂಕಾದ ಹರಿಣಗಳು 13.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 95 ರನ್ ಗಳಿಸಿ 106ರನ್ ಅಂತರದಲ್ಲಿ ಸೋಲೊಪ್ಪಿಕೊಂಡಿದೆ.

ಭಾರತ ಪರ ಕುಲದೀಪ್ ಯಾದವ್ 2.5 ಓವರ್ ಮಾಡಿ ಕೇವಲ 17 ರನ್ ನೀಡಿ ಪ್ರಮುಖ 5 ವಿಕೆಟ್ ಪಡೆದರು. ಆಲ್ ರೌಂಡರ್ ಜಡೇಜಾ 2 ವಿಕೆಟ್ ಪಡೆದು ಗಮನ ಸೆಳೆದರು.

ಪಂದ್ಯ ಶ್ರೇಷ್ಠ: ಸೂರ್ಯ ಕುಮಾರ್ ಯಾದವ್

ಸರಣಿ ಶ್ರೇಷ್ಠ: ಸೂರ್ಯ ಕುಮಾರ್ ಯಾದವ್

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

4 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

9 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

9 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

9 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

14 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

14 hours ago