ಕ್ರೀಡೆ

IND vs SA 2nd test: ವೃತ್ತಿ ಜೀವನದ ಅಂತಿಮ ಪಂದ್ಯಕ್ಕೆ ಡೀನ್‌ ಎಲ್ಗರ್‌ ನಾಯಕ

ಕೇಪ್‌ಟೌನ್‌: ಇಲ್ಲಿನ ನ್ಯೂಲ್ಯಾಂಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಡೀನ್‌ ಎಲ್ಗರ್‌ ನಾಯಕರಾಗಲಿದ್ದಾರೆ.

ತಮ್ಮ ಕ್ರಿಕೆಟ್‌ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಅವರು ನಾಯಕರಾಗಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಾಯಕ ತೆಂಬಾ ಬವುಮಾ ಅವರು ಕೇಪ್‌ ನಲ್ಲಿ ನಡೆಯಲಿರುವ ಕೊನೆಯ ಪಂದ್ಯಕ್ಕೆ ಅಲಭ್ಯವಾಗಲಿದ್ದು, ಅವರ ಬದಲಿ ನಾಯಕರಾಗಿ ಎಲ್ಗರ್‌ ಕ್ರಿಕೆಟ್‌ ದಕ್ಷಿಣ ಆಫ್ರಿಕಾ ನೇಮಕಗೊಳಿಸಿದೆ.

ಇನ್ನೂ ತೆಂಬ ಬವುಮಾ ಅವರ ಬದಲಿಗೆ ಜುಬೇರ್‌ ಹಂಝಾ ಅವರು ಸ್ಥಾನ ಪಡೆದಿದ್ದಾರೆ.

36 ವರ್ಷದ ಎಲ್ಗರ್‌ ಟೀಂ ಇಂಡಿಯಾ ವಿರುದ್ಧ ಆಡಿದ ಮೊಲದ ಟೆಸ್ಟ್‌ನಲ್ಲಿ 185 ರನ್‌ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಡೀನ್‌ ಎಲ್ಗರ್‌ ಅವರು ಟೆಸ್ಟ್‌ ನಲ್ಲಿ ಇವರೆಗೆ 85 ಪಂದ್ಯಗಳಿಂದ 150 ಇನ್ನಿಂಗ್ಸ್‌ ಆಡಿದ್ದಾರೆ. 38.08ರ ಸರಾಸರಿಯಲ್ಲಿ 5,331 ರನ್‌ ದಾಖಲಿಸಿದ್ದು, ಇದರಲ್ಲಿ 14 ಶತಕ ಮತ್ತು 23 ಅರ್ಧ ಶತಕ ಬಾರಿಸಿದ್ದಾರೆ. 199 ರನ್‌ ಇದು ಅವರ ಟೆಸ್ಟ್‌ನ ಗರಿಷ್ಠ ರನ್‌ ಆಗಿದೆ.

https://x.com/ProteasMenCSA/status/1740426033768419508?s=20

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

2 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

4 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

5 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

6 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

10 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

10 hours ago