ಕ್ರೀಡೆ

IND vs SA 2nd test: ವೃತ್ತಿ ಜೀವನದ ಅಂತಿಮ ಪಂದ್ಯಕ್ಕೆ ಡೀನ್‌ ಎಲ್ಗರ್‌ ನಾಯಕ

ಕೇಪ್‌ಟೌನ್‌: ಇಲ್ಲಿನ ನ್ಯೂಲ್ಯಾಂಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಡೀನ್‌ ಎಲ್ಗರ್‌ ನಾಯಕರಾಗಲಿದ್ದಾರೆ.

ತಮ್ಮ ಕ್ರಿಕೆಟ್‌ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಅವರು ನಾಯಕರಾಗಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಾಯಕ ತೆಂಬಾ ಬವುಮಾ ಅವರು ಕೇಪ್‌ ನಲ್ಲಿ ನಡೆಯಲಿರುವ ಕೊನೆಯ ಪಂದ್ಯಕ್ಕೆ ಅಲಭ್ಯವಾಗಲಿದ್ದು, ಅವರ ಬದಲಿ ನಾಯಕರಾಗಿ ಎಲ್ಗರ್‌ ಕ್ರಿಕೆಟ್‌ ದಕ್ಷಿಣ ಆಫ್ರಿಕಾ ನೇಮಕಗೊಳಿಸಿದೆ.

ಇನ್ನೂ ತೆಂಬ ಬವುಮಾ ಅವರ ಬದಲಿಗೆ ಜುಬೇರ್‌ ಹಂಝಾ ಅವರು ಸ್ಥಾನ ಪಡೆದಿದ್ದಾರೆ.

36 ವರ್ಷದ ಎಲ್ಗರ್‌ ಟೀಂ ಇಂಡಿಯಾ ವಿರುದ್ಧ ಆಡಿದ ಮೊಲದ ಟೆಸ್ಟ್‌ನಲ್ಲಿ 185 ರನ್‌ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಡೀನ್‌ ಎಲ್ಗರ್‌ ಅವರು ಟೆಸ್ಟ್‌ ನಲ್ಲಿ ಇವರೆಗೆ 85 ಪಂದ್ಯಗಳಿಂದ 150 ಇನ್ನಿಂಗ್ಸ್‌ ಆಡಿದ್ದಾರೆ. 38.08ರ ಸರಾಸರಿಯಲ್ಲಿ 5,331 ರನ್‌ ದಾಖಲಿಸಿದ್ದು, ಇದರಲ್ಲಿ 14 ಶತಕ ಮತ್ತು 23 ಅರ್ಧ ಶತಕ ಬಾರಿಸಿದ್ದಾರೆ. 199 ರನ್‌ ಇದು ಅವರ ಟೆಸ್ಟ್‌ನ ಗರಿಷ್ಠ ರನ್‌ ಆಗಿದೆ.

https://x.com/ProteasMenCSA/status/1740426033768419508?s=20

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago