ಕ್ರೀಡೆ

IND vs SA 2nd test: ಟೀಂ ಇಂಡಿಯಾಗೆ ಭರ್ಜರಿ ಗಲುವು; ಸರಣಿ ಸಮಬಲ

ಕೇಪ್‌ಟೌನ್‌: ಟೀಂ ಇಂಡಿಯಾ ಮಾರಕ ಬೌಲಿಂಗ್‌ ದಾಳಿಗೆ ನಲುಗಿನ ಹರಿಣ ಪಡೆ ಎರಡನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಸೋಲು ಕಂಡಿದೆ. ಆ ಮೂಲಕ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಇತ್ತಂಡಗಳು ಸರಣಿ ಸಮಬಲದೊಂದಿಗೆ ತೃಪ್ತಿಪಟ್ಟುಕೊಂಡಿವೆ.

ಇಲ್ಲಿನ ನ್ಯೂಲ್ಯಾಂಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಸರಣಿಯ ಎರಡನೇ ಟೆಸ್ಟ್ ಪಂದ್ಯದ 2ನೇ ದಿನವಾದ ಗುರುವಾರ ಮತ್ತೆ ವೇಗದ ಬೌಲರ್‌ಗಳೇ ಪಾರುಪತ್ಯ ಮೆರೆದಿದ್ದಾರೆ. ಹರಿಣ ಪಡೆ ಭಾರತ ತಂಡದ ಮುಂದೆ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಸೋಲನುಭವಿಸಿದೆ.

62 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ 176 ರನ್‌ಗಳಿಗೆ ಸರ್ವಪತನ ಕಂಡಿತು. ಏಡನ್ ಮರ್ಕರಂ ಅವರ ಏಕಾಂಗಿ ಹೋರಾಟ ನಡೆಸಿ 106 ರನ್‌ಗಳಿಸಿ ಗಮನ ಸೆಳೆದರು. ಆಫ್ರಿಕಾ ತಂಡ ಭಾರತಕ್ಕೆ 79 ರನ್‌ಗಳ ಗೆಲುವಿನ ಗುರಿ ನೀಡಿತು.

ಸಾಧಾರಣ ಮೊತ್ತ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 3 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು. ಭಾರತ ತಂಡದ ಪರ ಯಶಸ್ವಿ 28, ಶುಭ್‌ಮನ್‌ ಗಿಲ್‌ 10, ವಿರಾಟ್‌ ಕೊಹ್ಲಿ 12 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಔಟಾಗದೇ 17 ಮತ್ತು ಇವರಿಗೆ ಜೊತೆಯಾಗಿ ಶ್ರೇಯಸ್‌ ಅಯ್ಯರ್‌ 4 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೀಂ ಇಂಡಿಯಾ ಅಂತಿಮವಾಗಿ 12 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 80 ರನ್‌ ದಾಖಲಿಸಿತು. ಹರಿಣ ಪಡೆಯಲ್ಲಿ ಕಗಿಸೋ ರಬಾಡ, ಬರ್ಜರ್‌ ಮತ್ತು ಎನ್ಸನ್‌ ತಲಾ 1 ವಿಕೆಟ್‌ ಪಡೆದರು.

ಎರಡನೇ ಟೆಸ್ಟ್‌ನಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಭಾರತದ ವೇಗಿ ಮೊಹಮ್ಮದ್ ಸಿರಾಜ್ (15ಕ್ಕೆ6) ದಾಳಿಗೆ ತತ್ತರಿಸಿಹೋಯಿತು. 23.2 ಓವರ್‌ಗಳಲ್ಲಿ 55 ರನ್ ಗಳಿಸಿ ಆಲೌಟ್ ಆಗಿ, ಆತಿಥೇಯರ ಮೊದಲ ಇನಿಂಗ್ಸ್ ಮುಕ್ತಾಯವಾಯಿತು.

ಊಟದ ವಿರಾಮದ ನಂತರ ಇನಿಂಗ್ಸ್ ಆರಂಭಿಸಿದ ಭಾರತ ತಂಡ 34.5 ಓವರ್‌ಗಳಲ್ಲಿ 153 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ 98 ರನ್‌ಗಳ ಮುನ್ನಡೆ ಗಳಿಸಿತು. ಎರಡನೇ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ದಿನದಾಟದ ಮುಕ್ತಾಯಕ್ಕೆ 17 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 62 ರನ್ ಗಳಿಸಿ ಇವತ್ತಿಗೆ(ಗುರುವಾರ) ಆಟ ಕಾಯ್ದಿರಿಸಿತ್ತು.

ಎರಡನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ 36.5 ಓವರ್‌ಗಳಲ್ಲಿ 176 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡ 12 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಸರಣಿ ಸಮಬಲ ಮಾಡಿಕೊಂಡಿತು.

ಪಂದ್ಯ ಶ್ರೇಷ್ಠ: ಮಹಮ್ಮದ್‌ ಸಿರಾಜ್‌

ಸರಣಿ ಶ್ರೇಷ್ಠ: ಡೀನ್‌ ಎಲ್ಗರ್‌ ಮತ್ತು ಜಸ್‌ಪ್ರಿತ್‌ ಬುಮ್ರಾ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago