ಕ್ರೀಡೆ

IND vs SA 2nd test: ಟೀಂ ಇಂಡಿಯಾಗೆ ಭರ್ಜರಿ ಗಲುವು; ಸರಣಿ ಸಮಬಲ

ಕೇಪ್‌ಟೌನ್‌: ಟೀಂ ಇಂಡಿಯಾ ಮಾರಕ ಬೌಲಿಂಗ್‌ ದಾಳಿಗೆ ನಲುಗಿನ ಹರಿಣ ಪಡೆ ಎರಡನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಸೋಲು ಕಂಡಿದೆ. ಆ ಮೂಲಕ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಇತ್ತಂಡಗಳು ಸರಣಿ ಸಮಬಲದೊಂದಿಗೆ ತೃಪ್ತಿಪಟ್ಟುಕೊಂಡಿವೆ.

ಇಲ್ಲಿನ ನ್ಯೂಲ್ಯಾಂಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಸರಣಿಯ ಎರಡನೇ ಟೆಸ್ಟ್ ಪಂದ್ಯದ 2ನೇ ದಿನವಾದ ಗುರುವಾರ ಮತ್ತೆ ವೇಗದ ಬೌಲರ್‌ಗಳೇ ಪಾರುಪತ್ಯ ಮೆರೆದಿದ್ದಾರೆ. ಹರಿಣ ಪಡೆ ಭಾರತ ತಂಡದ ಮುಂದೆ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಸೋಲನುಭವಿಸಿದೆ.

62 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ 176 ರನ್‌ಗಳಿಗೆ ಸರ್ವಪತನ ಕಂಡಿತು. ಏಡನ್ ಮರ್ಕರಂ ಅವರ ಏಕಾಂಗಿ ಹೋರಾಟ ನಡೆಸಿ 106 ರನ್‌ಗಳಿಸಿ ಗಮನ ಸೆಳೆದರು. ಆಫ್ರಿಕಾ ತಂಡ ಭಾರತಕ್ಕೆ 79 ರನ್‌ಗಳ ಗೆಲುವಿನ ಗುರಿ ನೀಡಿತು.

ಸಾಧಾರಣ ಮೊತ್ತ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 3 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು. ಭಾರತ ತಂಡದ ಪರ ಯಶಸ್ವಿ 28, ಶುಭ್‌ಮನ್‌ ಗಿಲ್‌ 10, ವಿರಾಟ್‌ ಕೊಹ್ಲಿ 12 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಔಟಾಗದೇ 17 ಮತ್ತು ಇವರಿಗೆ ಜೊತೆಯಾಗಿ ಶ್ರೇಯಸ್‌ ಅಯ್ಯರ್‌ 4 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೀಂ ಇಂಡಿಯಾ ಅಂತಿಮವಾಗಿ 12 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 80 ರನ್‌ ದಾಖಲಿಸಿತು. ಹರಿಣ ಪಡೆಯಲ್ಲಿ ಕಗಿಸೋ ರಬಾಡ, ಬರ್ಜರ್‌ ಮತ್ತು ಎನ್ಸನ್‌ ತಲಾ 1 ವಿಕೆಟ್‌ ಪಡೆದರು.

ಎರಡನೇ ಟೆಸ್ಟ್‌ನಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಭಾರತದ ವೇಗಿ ಮೊಹಮ್ಮದ್ ಸಿರಾಜ್ (15ಕ್ಕೆ6) ದಾಳಿಗೆ ತತ್ತರಿಸಿಹೋಯಿತು. 23.2 ಓವರ್‌ಗಳಲ್ಲಿ 55 ರನ್ ಗಳಿಸಿ ಆಲೌಟ್ ಆಗಿ, ಆತಿಥೇಯರ ಮೊದಲ ಇನಿಂಗ್ಸ್ ಮುಕ್ತಾಯವಾಯಿತು.

ಊಟದ ವಿರಾಮದ ನಂತರ ಇನಿಂಗ್ಸ್ ಆರಂಭಿಸಿದ ಭಾರತ ತಂಡ 34.5 ಓವರ್‌ಗಳಲ್ಲಿ 153 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ 98 ರನ್‌ಗಳ ಮುನ್ನಡೆ ಗಳಿಸಿತು. ಎರಡನೇ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ದಿನದಾಟದ ಮುಕ್ತಾಯಕ್ಕೆ 17 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 62 ರನ್ ಗಳಿಸಿ ಇವತ್ತಿಗೆ(ಗುರುವಾರ) ಆಟ ಕಾಯ್ದಿರಿಸಿತ್ತು.

ಎರಡನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ 36.5 ಓವರ್‌ಗಳಲ್ಲಿ 176 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡ 12 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಸರಣಿ ಸಮಬಲ ಮಾಡಿಕೊಂಡಿತು.

ಪಂದ್ಯ ಶ್ರೇಷ್ಠ: ಮಹಮ್ಮದ್‌ ಸಿರಾಜ್‌

ಸರಣಿ ಶ್ರೇಷ್ಠ: ಡೀನ್‌ ಎಲ್ಗರ್‌ ಮತ್ತು ಜಸ್‌ಪ್ರಿತ್‌ ಬುಮ್ರಾ.

andolanait

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

1 hour ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

1 hour ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

2 hours ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago