ಕ್ರೀಡೆ

IND vs SA 2nd test: ಟೀಂ ಇಂಡಿಯಾಗೆ ಭರ್ಜರಿ ಗಲುವು; ಸರಣಿ ಸಮಬಲ

ಕೇಪ್‌ಟೌನ್‌: ಟೀಂ ಇಂಡಿಯಾ ಮಾರಕ ಬೌಲಿಂಗ್‌ ದಾಳಿಗೆ ನಲುಗಿನ ಹರಿಣ ಪಡೆ ಎರಡನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಸೋಲು ಕಂಡಿದೆ. ಆ ಮೂಲಕ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಇತ್ತಂಡಗಳು ಸರಣಿ ಸಮಬಲದೊಂದಿಗೆ ತೃಪ್ತಿಪಟ್ಟುಕೊಂಡಿವೆ.

ಇಲ್ಲಿನ ನ್ಯೂಲ್ಯಾಂಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಸರಣಿಯ ಎರಡನೇ ಟೆಸ್ಟ್ ಪಂದ್ಯದ 2ನೇ ದಿನವಾದ ಗುರುವಾರ ಮತ್ತೆ ವೇಗದ ಬೌಲರ್‌ಗಳೇ ಪಾರುಪತ್ಯ ಮೆರೆದಿದ್ದಾರೆ. ಹರಿಣ ಪಡೆ ಭಾರತ ತಂಡದ ಮುಂದೆ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಸೋಲನುಭವಿಸಿದೆ.

62 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ 176 ರನ್‌ಗಳಿಗೆ ಸರ್ವಪತನ ಕಂಡಿತು. ಏಡನ್ ಮರ್ಕರಂ ಅವರ ಏಕಾಂಗಿ ಹೋರಾಟ ನಡೆಸಿ 106 ರನ್‌ಗಳಿಸಿ ಗಮನ ಸೆಳೆದರು. ಆಫ್ರಿಕಾ ತಂಡ ಭಾರತಕ್ಕೆ 79 ರನ್‌ಗಳ ಗೆಲುವಿನ ಗುರಿ ನೀಡಿತು.

ಸಾಧಾರಣ ಮೊತ್ತ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 3 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು. ಭಾರತ ತಂಡದ ಪರ ಯಶಸ್ವಿ 28, ಶುಭ್‌ಮನ್‌ ಗಿಲ್‌ 10, ವಿರಾಟ್‌ ಕೊಹ್ಲಿ 12 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಔಟಾಗದೇ 17 ಮತ್ತು ಇವರಿಗೆ ಜೊತೆಯಾಗಿ ಶ್ರೇಯಸ್‌ ಅಯ್ಯರ್‌ 4 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೀಂ ಇಂಡಿಯಾ ಅಂತಿಮವಾಗಿ 12 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 80 ರನ್‌ ದಾಖಲಿಸಿತು. ಹರಿಣ ಪಡೆಯಲ್ಲಿ ಕಗಿಸೋ ರಬಾಡ, ಬರ್ಜರ್‌ ಮತ್ತು ಎನ್ಸನ್‌ ತಲಾ 1 ವಿಕೆಟ್‌ ಪಡೆದರು.

ಎರಡನೇ ಟೆಸ್ಟ್‌ನಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಭಾರತದ ವೇಗಿ ಮೊಹಮ್ಮದ್ ಸಿರಾಜ್ (15ಕ್ಕೆ6) ದಾಳಿಗೆ ತತ್ತರಿಸಿಹೋಯಿತು. 23.2 ಓವರ್‌ಗಳಲ್ಲಿ 55 ರನ್ ಗಳಿಸಿ ಆಲೌಟ್ ಆಗಿ, ಆತಿಥೇಯರ ಮೊದಲ ಇನಿಂಗ್ಸ್ ಮುಕ್ತಾಯವಾಯಿತು.

ಊಟದ ವಿರಾಮದ ನಂತರ ಇನಿಂಗ್ಸ್ ಆರಂಭಿಸಿದ ಭಾರತ ತಂಡ 34.5 ಓವರ್‌ಗಳಲ್ಲಿ 153 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ 98 ರನ್‌ಗಳ ಮುನ್ನಡೆ ಗಳಿಸಿತು. ಎರಡನೇ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ದಿನದಾಟದ ಮುಕ್ತಾಯಕ್ಕೆ 17 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 62 ರನ್ ಗಳಿಸಿ ಇವತ್ತಿಗೆ(ಗುರುವಾರ) ಆಟ ಕಾಯ್ದಿರಿಸಿತ್ತು.

ಎರಡನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ 36.5 ಓವರ್‌ಗಳಲ್ಲಿ 176 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡ 12 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 80 ರನ್‌ ಬಾರಿಸಿ ಸರಣಿ ಸಮಬಲ ಮಾಡಿಕೊಂಡಿತು.

ಪಂದ್ಯ ಶ್ರೇಷ್ಠ: ಮಹಮ್ಮದ್‌ ಸಿರಾಜ್‌

ಸರಣಿ ಶ್ರೇಷ್ಠ: ಡೀನ್‌ ಎಲ್ಗರ್‌ ಮತ್ತು ಜಸ್‌ಪ್ರಿತ್‌ ಬುಮ್ರಾ.

andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago