ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್ಬರ್ಗ್ ನ ನ್ಯೂ ವಂಡರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್ ಮಹಾರಾಜ್,
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…