ಕ್ರೀಡೆ

ಶ್ರೀಲಂಕಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ಏಕದಿನಕ್ಕೆ ರೋಹಿತ್‌, ಟಿ20ಗೆ ಸ್ಕೈ ನಾಯಕ!

ನವದೆಹಲಿ: ಮುಂಬರುವ ಭಾರತ ಹಾಗೂ ಶ್ರೀಲಂಕಾ ನಡುವಣಾ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಒಡಿಐ (ಏಕದಿನ) ತಂಡಕೆ ರೋಹಿತ್‌ ಶರ್ಮಾ ನಾಯಕರಾಗಿ ಮುಂದುವರೆದರೇ ಟಿ20 ತಂಡಕ್ಕೆ ಅಚ್ಚರಿಯಂಬಂತೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನೇಮಕ ಮಾಡಿ ಬಿಸಿಸಿಐ ಆದೇಶ ಹೊಡಿಸಿದೆ.

ಜೊತೆಗೆ 2023ರ ವಿಶ್ವಕಪ್‌ ಬಳಿಕ ಭಾರತ ತಂಡಕ್ಕೆ ಕರ್ನಾಟಕದ ಯುವ ಬ್ಯಾಟರ್‌ ಕೆ.ಎಲ್‌ ರಾಹುಲ್‌ ಅವರು ಕಂಬ್ಯಾಕ್‌ ಮಾಡಿದ್ದಾರೆ. ಅವರು ತಂಡದಲ್ಲಿ ವಿಕೇಟ್‌ ಕೀಪರ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಟಿ20 ವಿಶ್ವಕಪ್‌ ಗೆದ್ದ ತಂಡದಲ್ಲಿದ್ದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸೇರಿದಂತೆ ಅನೇಕರಿಗೆ ಬಿಸಿಸಿಐ ವಿಶ್ರಾಂತಿ ನೀಡಲಿದೆ ಎಂದು ಊಹಿಸಲಾಗಿತ್ತು. ಆದರೆ ಈ ಎಲ್ಲಾ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದು, ರವಿಂದ್ರ ಜಡೇಜಾ ಹಾಗೂ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಅಚ್ಚರಿಯಂಬಂತೆ ಟೀಂ ಇಂಡಿಯಾದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಏಕದಿನ ಹಾಗೂ ಟಿ20 ಎರಡೂ ತಂಡಕ್ಕೂ ಉಪ ನಾಯಕರಾಗಿ ನೇಮಕಗೊಂಡಿದ್ದಾರೆ.

ಏಕದಿನ ಸರಣಿಗೆ ಭಾರತ ತಂಡ ಇಂತಿದೆ: ರೋಹಿತ್‌ ಶರ್ಮಾ (ನಾಯಕ), ಶುಬ್‌ಮನ್‌ ಗಿಲಗಗಗ (ಉಪ ನಾಯಕ), ವಿರಾಟ್‌ ಕೊಹ್ಲಿ, ಕೆ.ಎಲ್‌ ರಾಹುಲ್‌ (ವಿ.ಕೀ), ರಿಷಭ್‌ ಪಂತ್‌ (ವಿ.ಕೀ), ಶ್ರೇಯಸ್‌ ಅಯ್ಯರ್‌, ಶಿವಂ ದುಬೆ, ಕುಲ್ದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್‌ಟನ್‌ ಸುಂದರ್‌, ಅರ್ಶ್‌ದೀಪ್‌ ಸಿಂಗ್‌, ರಿಯಾನ್‌ ಪರಾಗ್‌, ಅಕ್ಷರ್‌ ಪಟೇಲ್‌, ಖಲೀಲ್‌ ಅಹ್ಮದ್‌, ಹರ್ಷಿತ್‌ ರಾಣಾ.

ಟಿ20 ಸರಣಿಗೆ ಭಾರತ ತಂಡ ಇಂತಿದೆ: ಸೂರ್ಯಕುಮಾರ್‌ ಯಾದವ್‌ (ನಾಯಕ), ಶುಬ್‌ಮನ್‌ ಗಿಲ್‌ (ಉಪನಾಯಕ), ಯಶಸ್ವಿ ಜೈಸ್ವಾಲ್‌, ರಿಂಕು ಸಿಂಗ್‌, ರಿಯಾನ್‌ ಪರಾಗ್‌, ಸಂಜು ಸ್ಯಾಮ್ಸನ್‌ (ವಿ.ಕೀ), ರಿಷಭ್‌ ಪಂತ್‌ (ವಿ.ಕೀ), ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್‌, ವಾಷಿಂಗ್‌ಟನ್‌ ಸುಂದರ್‌, ರವಿ ಬಿಷ್ಣೋಯ್‌, ಅರ್ಶ್‌ದೀಪ್‌ ಸಿಂಗ್‌, ಖಲೀಲ್‌ ಅಹ್ಮದ್‌, ಮೊಹಮ್ಮದ್‌ ಸಿರಾಜ್‌.

ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಹಾಗೂ ಟಿ20 ಏಕದಿನ ಸರಣಿ ವೇಳಾಪಟ್ಟಿ.

ಟಿ20 ಏಕದಿನ ಸರಣಿ ವೇಳಾಪಟ್ಟಿ
ಮೊದಲ ಟಿ20 ಜು.27 ರಂದು ಸಂಜೆ 7ಕ್ಕೆ
ಎರಡನೇ ಟಿ20 ಜು.28 ರಂದು ಸಂಜೆ 7ಕ್ಕೆ
ಮೂರನೇ ಟಿ20 ಜು.30 ರಂದು ಸಂಜೆ 7ಕ್ಕೆ

ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ ಆಗಸ್ಟ್‌. 2ರಂದು ಮದ್ಯಾಹ್ನ 2.30ಕ್ಕೆ
ಎರಡನೇ ಏಕದಿನ ಆಗಸ್ಟ್‌. 4ರಂದು ಮದ್ಯಾಹ್ನ 2.30ಕ್ಕೆ
ಮೂರನೇ ಏಕದಿನ ಆಗಸ್ಟ್‌. 7ರಂದು ಮದ್ಯಾಹ್ನ 2.30ಕ್ಕೆ

https://x.com/PTI_News/status/1813937195096449451

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago