ಕ್ರೀಡೆ

ಶ್ರೀಲಂಕಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ಏಕದಿನಕ್ಕೆ ರೋಹಿತ್‌, ಟಿ20ಗೆ ಸ್ಕೈ ನಾಯಕ!

ನವದೆಹಲಿ: ಮುಂಬರುವ ಭಾರತ ಹಾಗೂ ಶ್ರೀಲಂಕಾ ನಡುವಣಾ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಒಡಿಐ (ಏಕದಿನ) ತಂಡಕೆ ರೋಹಿತ್‌ ಶರ್ಮಾ ನಾಯಕರಾಗಿ ಮುಂದುವರೆದರೇ ಟಿ20 ತಂಡಕ್ಕೆ ಅಚ್ಚರಿಯಂಬಂತೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನೇಮಕ ಮಾಡಿ ಬಿಸಿಸಿಐ ಆದೇಶ ಹೊಡಿಸಿದೆ.

ಜೊತೆಗೆ 2023ರ ವಿಶ್ವಕಪ್‌ ಬಳಿಕ ಭಾರತ ತಂಡಕ್ಕೆ ಕರ್ನಾಟಕದ ಯುವ ಬ್ಯಾಟರ್‌ ಕೆ.ಎಲ್‌ ರಾಹುಲ್‌ ಅವರು ಕಂಬ್ಯಾಕ್‌ ಮಾಡಿದ್ದಾರೆ. ಅವರು ತಂಡದಲ್ಲಿ ವಿಕೇಟ್‌ ಕೀಪರ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಟಿ20 ವಿಶ್ವಕಪ್‌ ಗೆದ್ದ ತಂಡದಲ್ಲಿದ್ದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸೇರಿದಂತೆ ಅನೇಕರಿಗೆ ಬಿಸಿಸಿಐ ವಿಶ್ರಾಂತಿ ನೀಡಲಿದೆ ಎಂದು ಊಹಿಸಲಾಗಿತ್ತು. ಆದರೆ ಈ ಎಲ್ಲಾ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದು, ರವಿಂದ್ರ ಜಡೇಜಾ ಹಾಗೂ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಅಚ್ಚರಿಯಂಬಂತೆ ಟೀಂ ಇಂಡಿಯಾದ ಯುವ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಏಕದಿನ ಹಾಗೂ ಟಿ20 ಎರಡೂ ತಂಡಕ್ಕೂ ಉಪ ನಾಯಕರಾಗಿ ನೇಮಕಗೊಂಡಿದ್ದಾರೆ.

ಏಕದಿನ ಸರಣಿಗೆ ಭಾರತ ತಂಡ ಇಂತಿದೆ: ರೋಹಿತ್‌ ಶರ್ಮಾ (ನಾಯಕ), ಶುಬ್‌ಮನ್‌ ಗಿಲಗಗಗ (ಉಪ ನಾಯಕ), ವಿರಾಟ್‌ ಕೊಹ್ಲಿ, ಕೆ.ಎಲ್‌ ರಾಹುಲ್‌ (ವಿ.ಕೀ), ರಿಷಭ್‌ ಪಂತ್‌ (ವಿ.ಕೀ), ಶ್ರೇಯಸ್‌ ಅಯ್ಯರ್‌, ಶಿವಂ ದುಬೆ, ಕುಲ್ದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್‌ಟನ್‌ ಸುಂದರ್‌, ಅರ್ಶ್‌ದೀಪ್‌ ಸಿಂಗ್‌, ರಿಯಾನ್‌ ಪರಾಗ್‌, ಅಕ್ಷರ್‌ ಪಟೇಲ್‌, ಖಲೀಲ್‌ ಅಹ್ಮದ್‌, ಹರ್ಷಿತ್‌ ರಾಣಾ.

ಟಿ20 ಸರಣಿಗೆ ಭಾರತ ತಂಡ ಇಂತಿದೆ: ಸೂರ್ಯಕುಮಾರ್‌ ಯಾದವ್‌ (ನಾಯಕ), ಶುಬ್‌ಮನ್‌ ಗಿಲ್‌ (ಉಪನಾಯಕ), ಯಶಸ್ವಿ ಜೈಸ್ವಾಲ್‌, ರಿಂಕು ಸಿಂಗ್‌, ರಿಯಾನ್‌ ಪರಾಗ್‌, ಸಂಜು ಸ್ಯಾಮ್ಸನ್‌ (ವಿ.ಕೀ), ರಿಷಭ್‌ ಪಂತ್‌ (ವಿ.ಕೀ), ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್‌, ವಾಷಿಂಗ್‌ಟನ್‌ ಸುಂದರ್‌, ರವಿ ಬಿಷ್ಣೋಯ್‌, ಅರ್ಶ್‌ದೀಪ್‌ ಸಿಂಗ್‌, ಖಲೀಲ್‌ ಅಹ್ಮದ್‌, ಮೊಹಮ್ಮದ್‌ ಸಿರಾಜ್‌.

ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಹಾಗೂ ಟಿ20 ಏಕದಿನ ಸರಣಿ ವೇಳಾಪಟ್ಟಿ.

ಟಿ20 ಏಕದಿನ ಸರಣಿ ವೇಳಾಪಟ್ಟಿ
ಮೊದಲ ಟಿ20 ಜು.27 ರಂದು ಸಂಜೆ 7ಕ್ಕೆ
ಎರಡನೇ ಟಿ20 ಜು.28 ರಂದು ಸಂಜೆ 7ಕ್ಕೆ
ಮೂರನೇ ಟಿ20 ಜು.30 ರಂದು ಸಂಜೆ 7ಕ್ಕೆ

ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ ಆಗಸ್ಟ್‌. 2ರಂದು ಮದ್ಯಾಹ್ನ 2.30ಕ್ಕೆ
ಎರಡನೇ ಏಕದಿನ ಆಗಸ್ಟ್‌. 4ರಂದು ಮದ್ಯಾಹ್ನ 2.30ಕ್ಕೆ
ಮೂರನೇ ಏಕದಿನ ಆಗಸ್ಟ್‌. 7ರಂದು ಮದ್ಯಾಹ್ನ 2.30ಕ್ಕೆ

https://x.com/PTI_News/status/1813937195096449451

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

6 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

12 hours ago