ಕ್ರೀಡೆ

ಟಿ20 ವಿಶ್ವಕಪ್: ಹರ್ಮನ್‌ಪ್ರೀತ್ –ರಿಚಾ ಮಿಂಚು, ವಿಂಡೀಸ್ ವಿರುದ್ಧ ಗೆದ್ದ ಭಾರತ

ಕೇಟ್‌ಟೌನ್‌: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಬುಧವಾರ ವೆಸ್ಟ್‌ ಇಂಡೀಸ್ ವಿರುದ್ಧ ಆರು ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿತು. 

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್‌ ಇಂಡೀಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು. ಸ್ಟೆಫಾನಿ ಟೈಲರ್ 42, ಶೆಮೈನ್ ಕ್ಯಾಂಪ್‌ಬೆಲ್ 30, ಚೆಡಿಯನ್ ನೇಷನ್ 21 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.

119 ರನ್‌ ಗುರಿ ಬೆನ್ನತ್ತಿದ ಭಾರತ 18.1 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಭಾರತದ ಪರ ರಿಚಾ ಘೋಷ್ ಔಟಾಗದೆ 44, ಹರ್ಮನ್‌ಪ್ರೀತ್ ಕೌರ್ 33, ಶಫಾಲಿ ವರ್ಮಾ 28 ರನ್ ಗಳಿಸಿ ಗೆಲುವಿನ ರೂವಾರಿಗಳಾದರು.

ವೆಸ್ಟ್‌ ಇಂಡೀಸ್ ಪರ ಕರಿಷ್ಮಾ ರಾಮ್‌ಹರಾಕ್ 2, ಹೇಲಿ ಮ್ಯಾಥ್ಯೂಸ್, ಚಿನೆಲ್ಲೆ ಹೆನ್ರಿ ತಲಾ ಒಂದೊಂದು ವಿಕೆಟ್ ಪಡೆದರು. ಭಾರತ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಫೆ.12ರಂದು (ಭಾನುವಾರ) ಪಾಕಿಸ್ತಾನ ವಿರುದ್ಧ ಏಳು ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿತ್ತು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago