ಕ್ರೀಡೆ

ಅಮೆರಿಕದ ಶಕ್ತಿಶಾಲಿ ಫೈಟರ್‌ ಜೆಟ್‌ ಖರೀದಿ ಆಲೋಚನೆ ಕೈಬಿಟ್ಟ ಭಾರತ

ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಸಂಬಂಧ ಮಾತುಕತೆ ಇನ್ನೂ ಅಂತಿಮ ಹಂತಕ್ಕೆ ಬಂದಿಲ್ಲ. ವ್ಯಾಪಾರ ಒಪ್ಪಂದ ಅಂತಿಮಗೊಳ್ಳುವವರೆಗೂ ಶೇ.25ರ ತೆರಿಗೆಯನ್ನು ಭಾರತ ಸಹಿಸಿಕೊಳ್ಳಬೇಕಾಗಬಹುದು.

ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ ವೇಳೆ ಡೊನಾಲ್ಡ್ ಟ್ರಂಪ್ ಅವರು ಎಫ್-35 ಫೈಟರ್ ಜೆಟ್ ಅನ್ನು ಭಾರತಕ್ಕೆ ಆಫರ್ ಮಾಡಿದ್ದರು. ಇದೀಗ ಶಕ್ತಿಶಾಲಿ ಫೈಟರ್ ಜೆಟ್ ಎನಿಸಿದ ಎಫ್-35 ಅನ್ನು ಖರೀದಿಸುವ ಆಸಕ್ತಿ ಇಲ್ಲ ಎಂದು ಅಮೆರಿಕಕ್ಕೆ ಭಾರತ ತಿಳಿಸಿದೆ.

ಎಫ್-35 ವಿಮಾನವನ್ನು ಅಮೆರಿಕದ ಲಾಕ್ಹೀಡ್ ಮಾರ್ಟಿನ್ ಸಂಸ್ಥೆ ತಯಾರಿಸುತ್ತದೆ. ಭಾರತವು ಜಂಟಿಯಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಆದ್ಯತೆ ನೀಡುತ್ತಿದೆ.ಆದರೆ ಭಾರತೀಯ ಕಂಪೆನಿಯೊಂದಿಗೆ ಜಂಟಿಯಾಗಿ ಈ ಯುದ್ಧವಿಮಾನ ತಯಾರಿಸಲು ಅಮೆರಿಕ ಸಿದ್ಧವಿಲ್ಲ. ಭಾರತ ತನ್ನ ಮಿಲಿಟರಿ ಉಪಕರಣಗಳ ವಿಚಾರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಹೊಂದಿದೆ. ಈ ಕಾರಣಕ್ಕೆ ಎಫ್-35 ಯುದ್ಧವಿಮಾನ ಖರೀದಿ ಪ್ರಸ್ತಾಪದಿಂದ ಭಾರತ ಹಿಂದಕ್ಕೆ ಸರಿದಿರಬಹುದು. ಭಾರತ ತಾನೇ ಸ್ವಂತವಾಗಿ ಈ ಫೈಟರ್ ಜೆಟ್ ತಯಾರಿಸುವ ಪ್ರಯತ್ನದಲ್ಲಿದೆ. ಅದಕ್ಕೆ ಎಎಂಸಿಎ ಪ್ರಾಜೆಕ್ಟ್ ಆರಂಭವಾಗಿದೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

3 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

5 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

5 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

6 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

6 hours ago