ಕ್ರೀಡೆ

ಅಮೆರಿಕದ ಶಕ್ತಿಶಾಲಿ ಫೈಟರ್‌ ಜೆಟ್‌ ಖರೀದಿ ಆಲೋಚನೆ ಕೈಬಿಟ್ಟ ಭಾರತ

ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಸಂಬಂಧ ಮಾತುಕತೆ ಇನ್ನೂ ಅಂತಿಮ ಹಂತಕ್ಕೆ ಬಂದಿಲ್ಲ. ವ್ಯಾಪಾರ ಒಪ್ಪಂದ ಅಂತಿಮಗೊಳ್ಳುವವರೆಗೂ ಶೇ.25ರ ತೆರಿಗೆಯನ್ನು ಭಾರತ ಸಹಿಸಿಕೊಳ್ಳಬೇಕಾಗಬಹುದು.

ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ ವೇಳೆ ಡೊನಾಲ್ಡ್ ಟ್ರಂಪ್ ಅವರು ಎಫ್-35 ಫೈಟರ್ ಜೆಟ್ ಅನ್ನು ಭಾರತಕ್ಕೆ ಆಫರ್ ಮಾಡಿದ್ದರು. ಇದೀಗ ಶಕ್ತಿಶಾಲಿ ಫೈಟರ್ ಜೆಟ್ ಎನಿಸಿದ ಎಫ್-35 ಅನ್ನು ಖರೀದಿಸುವ ಆಸಕ್ತಿ ಇಲ್ಲ ಎಂದು ಅಮೆರಿಕಕ್ಕೆ ಭಾರತ ತಿಳಿಸಿದೆ.

ಎಫ್-35 ವಿಮಾನವನ್ನು ಅಮೆರಿಕದ ಲಾಕ್ಹೀಡ್ ಮಾರ್ಟಿನ್ ಸಂಸ್ಥೆ ತಯಾರಿಸುತ್ತದೆ. ಭಾರತವು ಜಂಟಿಯಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಆದ್ಯತೆ ನೀಡುತ್ತಿದೆ.ಆದರೆ ಭಾರತೀಯ ಕಂಪೆನಿಯೊಂದಿಗೆ ಜಂಟಿಯಾಗಿ ಈ ಯುದ್ಧವಿಮಾನ ತಯಾರಿಸಲು ಅಮೆರಿಕ ಸಿದ್ಧವಿಲ್ಲ. ಭಾರತ ತನ್ನ ಮಿಲಿಟರಿ ಉಪಕರಣಗಳ ವಿಚಾರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಹೊಂದಿದೆ. ಈ ಕಾರಣಕ್ಕೆ ಎಫ್-35 ಯುದ್ಧವಿಮಾನ ಖರೀದಿ ಪ್ರಸ್ತಾಪದಿಂದ ಭಾರತ ಹಿಂದಕ್ಕೆ ಸರಿದಿರಬಹುದು. ಭಾರತ ತಾನೇ ಸ್ವಂತವಾಗಿ ಈ ಫೈಟರ್ ಜೆಟ್ ತಯಾರಿಸುವ ಪ್ರಯತ್ನದಲ್ಲಿದೆ. ಅದಕ್ಕೆ ಎಎಂಸಿಎ ಪ್ರಾಜೆಕ್ಟ್ ಆರಂಭವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago