ಕ್ರೀಡೆ

ಪ್ಯಾರಿಸ್‌ ಒಲಂಪಿಕ್ಸ್‌ಗೆ ವರ್ಣರಂಜಿತ ತೆರೆ: ಈ ಬಾರಿಯ ಒಲಂಪಿಕ್ಸ್‌ನಲ್ಲಿ ಭಾರತದ ಸಾಧನೆಯಿದು!

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ 2024ರ ಪ್ಯಾರಿಸ್‌ ಒಲಂಪಿಕ್ಸ್‌ ಅಂತಿಮಘಟ್ಟಕ್ಕೆ ತುಲುಪಿದೆ. ಜುಲೈ 26 ರಿಂದ ಆಗಸ್ಟ್‌ 11 ವರೆಗೆ ಒಟ್ಟು 17 ದಿನಗಳ ಕಾಲ ನಡೆದ ಈ ಒಲಂಪಿಕ್ಸ್‌ಗೆ ಇಂದು ಅಂತಿಮ ದಿನವಾಗಿದೆ.

ಭಾರತೀಯ ಕಾಲಮಾನ ಮಧ್ಯರಾತ್ರಿ 12.30ಕ್ಕೆ ನೇರ ಪ್ರಸಾರ ಆಗಲಿದೆ. ಈ ಮುಕ್ತಾಯ ಸಮಾರಂಭದಲ್ಲಿ ಭಾರತ ಪರವಾಗಿ ಕಂಚು ಗೆದ್ದ ಶೂಟರ್‌ ಮನು ಭಾಕರ್‌ ಹಾಗೂ ಗೋಲ್‌ ಕೀಪರ್‌ ಶ್ರೀಜೇಶ್‌ ವಾರು ಧ್ವಜಧಾರಿಯಾಗಿರಲಿದ್ದಾರೆ.

ಈ ಮುಕ್ತಾಯ ಸಮಾರಂಭದಲ್ಲಿ ನೃತ್ಯ ಪ್ರದರ್ಶಕರು, ಅಕ್ರೋಬ್ಯಾಟ್‌ಗಳು, ಸರ್ಕಸ್‌ ಹಾಗೂ ಸೃತ್ಯಗಾರರು ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ. ಇದರೊಂದಿಗೆ ಸಂಗೀತ ರಸಸಂಜೆಯೂ ಇರಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇನ್ನು ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಸ್ಪೋರ್ಟ್‌ 18 ನೆಟ್ವರ್ಕ್‌ ಚಾನೆಲ್‌ಗಳಲ್ಲಿ ಹಾಗೂ ಜಿಯೋ ಆಪ್‌ ಮೂಲಕ ಉಚಿತವಾಗಿ ವೀಕ್ಷಣೆ ಮಾಡಬಹುದಾಗಿದೆ.

ಭಾರತದ ಸಾಧನೆ: ಈ ಬಾರಿಯ ಒಲಂಪಿಕ್ಸ್‌ನಲ್ಲಿ ಭಾರತ ತಂಡ ನಿರೀಕ್ಷಿತಾ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಚಿನ್ನದ ಹುಡುಗ ನೀರಜ್‌ ಚೋಪ್ರಾ ಬೆಳ್ಳಿಗೆ ತಮ್ಮ ಅಭಿಯಾನ ಮುಗಿಸಿದರೇ, ಇತ್ತ ಚಿನ್ನದ ಭರವಸೆ ನೀಡಿದ್ದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ತೂಕ ಏರಿಕೆ ವಿವಾದದ ಮೂಲಕ ಟೂರ್ನಿಯಿಂದಲೇ ಬ್ಯಾನ್‌ ಆಗಿ ಹೊರನಡೆದಿದ್ದಾರೆ.

ಮನು ಭಾಕರ್‌ ಅವರು ಶೂಟಿಂಗ್‌ನಲ್ಲಿ ಎರಡು ಚಿನ್ನ ಗೆದ್ದ ಸಾಧನೆ ಮಾಡಿದರೇ, ನೀರಜ್‌ ಬೆಳ್ಳಿ ಗೆದ್ದದ್ದೇ ಈ ಬಾರಿಯ ಒಲಂಪಿಕ್ಸ್‌ನ ಶ್ರೇಷ್ಠ ಸಾಧನೆಯಾಗಿದೆ. ಒಂದು ಬೆಳ್ಳಿ ಹಾಗೂ ಐದು ಕಂಚು ಸಹಿತ ಭಾರತ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಕೇವಲ 6 ಪದಕಗಳನ್ನು ಗೆಲ್ಲುವ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ 69ನೇ ಸ್ಥಾನ ಪಡೆದಿದೆ.

ಭಾರತ ಪರವಾಗಿ ಪದಕ ಗೆದ್ದವರಿವರು:

ನೀರಜ್‌ ಚೋಪ್ರಾ: ಜಾವೆಲಿನ್‌ ಥ್ರೋ- ಬೆಳ್ಳಿ
ಮನು ಭಾಕರ್‌: ಏರ್‌ ಪಿಸ್ತೂಲ್‌ (10 ಮೀ)- ಕಂಚು
ಪುರುಷರ ಹಾಕಿ ತಂಡ– ಕಂಚು
ಸ್ವಪ್ನಿಲ್‌ ಕುಸಾಲೆ: ಏರ್‌ ಪಿಸ್ತೂಲ್‌ (50 ಮೀ)- ಕಂಚು
ಅಮನ್‌ ಸೆಹ್ರಾವತ್‌: ಕುಸ್ತಿ (ಫ್ರೀಸ್ಟೈಲ್‌ 57ಕೆಜಿ)- ಕಂಚು
ಮನು ಭಾಕರ್‌, ಸರಬ್ಜೋತ್‌ ಸಿಂಗ್‌: ಏರ್‌ ಪಿಸ್ತೂಲ್‌ (10 ಮೀ, ಮಿಶ್ರತಂಡ)- ಕಂಚು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

19 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

22 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

43 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

59 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

2 hours ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago