ಪ್ಯಾರಿಸ್: ವಿಶ್ವವಿಖ್ಯಾತ ಕ್ರೀಡಾಕೂಟ 2024ರ ಪ್ಯಾರಿಸ್ ಒಲಂಪಿಕ್ಸ್ ಅಂತಿಮಘಟ್ಟಕ್ಕೆ ತುಲುಪಿದೆ. ಜುಲೈ 26 ರಿಂದ ಆಗಸ್ಟ್ 11 ವರೆಗೆ ಒಟ್ಟು 17 ದಿನಗಳ ಕಾಲ ನಡೆದ ಈ ಒಲಂಪಿಕ್ಸ್ಗೆ ಇಂದು ಅಂತಿಮ ದಿನವಾಗಿದೆ.
ಭಾರತೀಯ ಕಾಲಮಾನ ಮಧ್ಯರಾತ್ರಿ 12.30ಕ್ಕೆ ನೇರ ಪ್ರಸಾರ ಆಗಲಿದೆ. ಈ ಮುಕ್ತಾಯ ಸಮಾರಂಭದಲ್ಲಿ ಭಾರತ ಪರವಾಗಿ ಕಂಚು ಗೆದ್ದ ಶೂಟರ್ ಮನು ಭಾಕರ್ ಹಾಗೂ ಗೋಲ್ ಕೀಪರ್ ಶ್ರೀಜೇಶ್ ವಾರು ಧ್ವಜಧಾರಿಯಾಗಿರಲಿದ್ದಾರೆ.
ಈ ಮುಕ್ತಾಯ ಸಮಾರಂಭದಲ್ಲಿ ನೃತ್ಯ ಪ್ರದರ್ಶಕರು, ಅಕ್ರೋಬ್ಯಾಟ್ಗಳು, ಸರ್ಕಸ್ ಹಾಗೂ ಸೃತ್ಯಗಾರರು ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ. ಇದರೊಂದಿಗೆ ಸಂಗೀತ ರಸಸಂಜೆಯೂ ಇರಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನು ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಸ್ಪೋರ್ಟ್ 18 ನೆಟ್ವರ್ಕ್ ಚಾನೆಲ್ಗಳಲ್ಲಿ ಹಾಗೂ ಜಿಯೋ ಆಪ್ ಮೂಲಕ ಉಚಿತವಾಗಿ ವೀಕ್ಷಣೆ ಮಾಡಬಹುದಾಗಿದೆ.
ಭಾರತದ ಸಾಧನೆ: ಈ ಬಾರಿಯ ಒಲಂಪಿಕ್ಸ್ನಲ್ಲಿ ಭಾರತ ತಂಡ ನಿರೀಕ್ಷಿತಾ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಚಿನ್ನದ ಹುಡುಗ ನೀರಜ್ ಚೋಪ್ರಾ ಬೆಳ್ಳಿಗೆ ತಮ್ಮ ಅಭಿಯಾನ ಮುಗಿಸಿದರೇ, ಇತ್ತ ಚಿನ್ನದ ಭರವಸೆ ನೀಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕ ಏರಿಕೆ ವಿವಾದದ ಮೂಲಕ ಟೂರ್ನಿಯಿಂದಲೇ ಬ್ಯಾನ್ ಆಗಿ ಹೊರನಡೆದಿದ್ದಾರೆ.
ಮನು ಭಾಕರ್ ಅವರು ಶೂಟಿಂಗ್ನಲ್ಲಿ ಎರಡು ಚಿನ್ನ ಗೆದ್ದ ಸಾಧನೆ ಮಾಡಿದರೇ, ನೀರಜ್ ಬೆಳ್ಳಿ ಗೆದ್ದದ್ದೇ ಈ ಬಾರಿಯ ಒಲಂಪಿಕ್ಸ್ನ ಶ್ರೇಷ್ಠ ಸಾಧನೆಯಾಗಿದೆ. ಒಂದು ಬೆಳ್ಳಿ ಹಾಗೂ ಐದು ಕಂಚು ಸಹಿತ ಭಾರತ ಪ್ಯಾರಿಸ್ ಒಲಂಪಿಕ್ಸ್ನಲ್ಲಿ ಕೇವಲ 6 ಪದಕಗಳನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ 69ನೇ ಸ್ಥಾನ ಪಡೆದಿದೆ.
ಭಾರತ ಪರವಾಗಿ ಪದಕ ಗೆದ್ದವರಿವರು:
ನೀರಜ್ ಚೋಪ್ರಾ: ಜಾವೆಲಿನ್ ಥ್ರೋ- ಬೆಳ್ಳಿ
ಮನು ಭಾಕರ್: ಏರ್ ಪಿಸ್ತೂಲ್ (10 ಮೀ)- ಕಂಚು
ಪುರುಷರ ಹಾಕಿ ತಂಡ– ಕಂಚು
ಸ್ವಪ್ನಿಲ್ ಕುಸಾಲೆ: ಏರ್ ಪಿಸ್ತೂಲ್ (50 ಮೀ)- ಕಂಚು
ಅಮನ್ ಸೆಹ್ರಾವತ್: ಕುಸ್ತಿ (ಫ್ರೀಸ್ಟೈಲ್ 57ಕೆಜಿ)- ಕಂಚು
ಮನು ಭಾಕರ್, ಸರಬ್ಜೋತ್ ಸಿಂಗ್: ಏರ್ ಪಿಸ್ತೂಲ್ (10 ಮೀ, ಮಿಶ್ರತಂಡ)- ಕಂಚು
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…