ಕ್ರೀಡೆ

17 ವರ್ಷಗಳ ಬಳಿಕ ಪ್ರಶಸ್ತಿಗಾಗಿ ಕಾದಾಟ ನಡೆಸಲಿರುವ ಇಂಡಿಯಾ/ಪಾಕಿಸ್ತಾನ್‌

ಲಂಡನ್‌: ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 17 ವರ್ಷಗಳ ಬಳಿಕ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಇತ್ತಂಡಗಳು ಆಗಮಿಸಿದ್ದು, ಟ್ರೋಫಿಗಾಗಿ ಕಾದಾಟ ನಡೆಸಲಿವೆ.

ಇಲ್ಲಿ ನಡೆಯುತ್ತಿರುವ ವರ್ಲ್ಡ್‌ ಚಾಂಪಿಯನ್‌ಶಿಪ್‌ ಆಫ್‌ ಲೆಜೆಂಡ್ಸ್‌-2024 (ಡಬ್ಲ್ಯೂಸಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಇಂಡಿಯಾ ಚಾಂಪಿಯನ್ಸ್‌ ಹಾಗೂ ಪಾಕಿಸ್ತಾನ್‌ ಚಾಂಪಿಯನ್ಸ್‌ ತಂಡಗಳು ಪ್ರಶಸ್ತಿ ಸುತ್ತಿನಲ್ಲಿ ಕಾದಾಟ ನಡೆಸುತ್ತಿದ್ದು ಗೆದ್ದ ತಂಡ ಟ್ರೋಫಿಗೆ ಮುತ್ತಿಡಲಿದೆ.

ಶುಕ್ರವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ಸ್‌ ತಂಡವನ್ನು 86ರನ್‌ ಗಳಿಂದ ಭಾರತ ತಂಡ ಮಣಿಸಿ ಫೈನಲ್‌ ಲಗ್ಗೆಯಿಟ್ಟರೇ, ಇತ್ತ ವೆಸ್ಟ್‌ ಇಂಡೀಸ್‌ ತಂಡವನ್ನು 20ರನ್‌ ಗಳಿಂದ ಸೋಲಿಸಿದ ಪಾಕಿಸ್ತಾನ ಕೂಡಾ ಫೈನಲ್‌ಗೆ ಟಿಕೆಟ್‌ ಪಡೆದುಕೊಂಡಿದೆ.

ಕ್ರಿಕೆಟ್‌ನ ಬದ್ಧ ವೈರಿಗಳು ಎಂದೇ ಖ್ಯಾತರಾಗಿರುವ ಇತ್ತಂಡಗಳು ಶನಿವಾರ ಪ್ರಶಸ್ತಿಗಾಗಿ ಕಾದಾಡಲಿವೆ.

ಇಲ್ಲಿನ ಬರ್ಮಿಂಗ್‌ಹ್ಯಾಮ್‌ ಕ್ರೀಡಾಂಗಣದಲ್ಲಿ ಇಂದು (ಜು.13) ರಾತ್ರಿ 9 ಗಂಟೆ (ಭಾರತೀಯ ಕಾಲಮಾನ) ಪಂದ್ಯ ನಡೆಯಲಿದೆ.

ಲೈವ್‌ ವೀಕ್ಷಣೆ: ಭಾರತ ಹಾಗೂ ಪಾಕಿಸ್ತಾನ ನಡುವಣ ಫೈನಲ್‌ ಪಂದ್ಯವನ್ನು ಸ್ಟಾರ್‌ ಸ್ಪೋರ್ಟ್ಸ್‌ ನೆಟ್ವರ್ಕ್‌ನಲ್ಲಿ ವೀಕ್ಷಣೆ ಮಾಡಬಹುದಾಗಿದೆ. ಜತೆಗೆ ಫ್ಯಾನ್‌ಕೋಡ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ವೀಕ್ಷಿಸಬಹುದಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago