ಕ್ರೀಡೆ

t20 worldcup 2024: ವಿಶ್ವಕಪ್‌ ಕಾಳಗದಲ್ಲಿ ಪಾಕ್‌ ವಿರುದ್ಧ ಭಾರತದ್ದೇ ಮೇಲುಗೈ

ನ್ಯೂಯಾರ್ಕ್‌: ಇಂದು t20 worldcup 2024ರ ಗ್ರೂಪ್‌ ʼಎʼ ಲೀಗ್‌ ಪಂದ್ಯದಲ್ಲಿ ಏಷ್ಯಾಖಂಡದ ಬದ್ಧ ವೈರಿಗಳ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಹೌದು. ಇದು ಟೀಂ ಇಂಡಿಯಾ ಹಾಗೂ ಪಾಕಿಸ್ತಾನ್‌ ನಡುವಿನ ವಿಶ್ವಕಪ್‌ ಟಿ20 ಪಂದ್ಯಾವಳಿಯಾಗಿದೆ.

ಇಲ್ಲಿನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ 8 ಗಂಟೆಗೆ ಭಾರತ ಹಾಗೂ ಪಾಕಿಸ್ತಾನ ಕಾದಾಟ ನಡೆಸಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತೀ ಪ್ರಮುಖ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡಗಳು ಗ್ರೂಪ್‌ನಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಳ್ಳಲು ಸಹಕಾರಿಯಾಗಲಿದೆ.

ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳ ಟಿ20 ಮುಖಾಮುಖಿ ಪಂದ್ಯಗಳ ವಿಚಾರಕ್ಕೆ ಬಂದರೆ ಭಾರತ ಪಾಕ್‌ ವಿರುದ್ಧ ಪ್ರಾಬಲ್ಯ ಮೆರೆದಿದೆ. ಇತ್ತಂಡಗಳು ಈವರೆಗೆ ಟಿ20 ಮಾದರಿಯಲ್ಲಿ 12 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಬರೊಬ್ಬರಿ 9 ಬಾರಿ ಟೀಂ ಇಂಡಿಯಾ ಗೆದ್ದು ಬೀಗಿದರೇ ಪಾಕ್‌ ಕೇಲವ ಮೂರು ಬಾರಿ ಮಾತ್ರ ಗೆದ್ದಿದೆ.

ಇನ್ನು ವಿಶ್ವಕಪ್‌ ಟಿ20 ಪಂದ್ಯಗಳ ಕಾದಾಟದ ಬಗ್ಗೆ ಹೇಳುವುದಾದರೇ ಈವರೆಗೆ ಒಟ್ಟು ಏಳು ಪಂದ್ಯಗಳಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದು, ಇದರಲ್ಲಿ ಟೀಂ ಇಂಡಿಯಾ 6 ಪಂದ್ಯಗಳಲ್ಲಿ ಗೆದ್ದರೆ ಪಾಕ್‌ ಕೇವಲ 1 ಪಂದ್ಯ ಮಾತ್ರ ಗೆದ್ದಿದೆ.

ಪಂದ್ಯದ ವಿವರ: ಇಂಡಿಯಾ / ಪಾಕಿಸ್ತಾನ ನಡುವಿನ ಪಂದ್ಯ ಇಂದು (ಜೂನ್‌.9) ರಾತ್ರಿ 8 ಗಂಟೆಗೆ(ಭಾರತೀಯ ಕಾಲಮಾ) ಪಂದ್ಯ ನಡೆಯುತ್ತದೆ. ಆದರೆ ಅಮೇರಿಕಾ ಕಾಲಮಾನದಲ್ಲಿ ಈ ಪಂದ್ಯ ಬೆಳಿಗ್ಗೆ 10.30ಕ್ಕೆ ಆರಂಭವಾಗುತ್ತದೆ.

ಪಂದ್ಯ ವಿಕ್ಷಣೆ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್ವರ್ಕ್‌, ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡ ನೆಟ್ವರ್ಕ್‌ ಸೇರಿದಂತೆ ಎಲ್ಲಾ ಸ್ಪೋರ್ಟ್ಸ್‌ ನೆಟ್ವರ್ಕ್‌ಗಳಲ್ಲಿಯೂ ಪಂದ್ಯ ವೀಕ್ಷಿಸಬಹುದಾಗಿದೆ.

ಸ್ಟ್ರೀಮಿಂಗ್‌: ಈ ಪಂದ್ಯವನ್ನು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ವೆಬ್‌ ಸೈಟ್‌ ಹಾಗೂ ಅಪ್ಲಿಕೇಷನ್‌ನಲ್ಲಿ ಉಚಿತವಾಗಿ ಪಂದ್ಯ ವೀಕ್ಷಿಸಬಹುದಾಗಿದೆ.

ಉಭಯ ತಂಡಗಳ ಆಟಗಾರರ ಮಾಹಿತಿ:

ಟೀಂ ಇಂಡಿಯಾ: ರೋಹಿತ್‌ ಶರ್ಮಾ (ನಾಯಕ), ಹಾರ್ದಿಕ್‌ ಪಾಂಡ್ಯ (ಉಪನಾಯಕ) ವಿರಾಟ್‌ ಕೊಹ್ಲಿ, ಯಶಸ್ವಿ ಜೈಸ್ವಾಲ್‌, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌ (ವಿ.ಕೀ), ಶಿವಂ ದುಬೆ, ರಿಷಭ್‌ ಪಂತ್‌ (ವಿ.ಕೀ), ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಅರ್ಶ್‌ದೀಪ್‌ ಸಿಂಗ್‌, ಕಲ್ದೀಪ್‌ ಯಾದವ್‌, ಯಜುವೇಂದರ್‌ ಚಾಹಲ್‌, ಮೊಹಮದ್‌ ಸಿರಾಜ್‌, ಜಸ್‌ಪ್ರಿತ್‌ ಬುಮ್ರಾ,

ಬೆಂಚ್‌; ಶುಭ್ಮನ್‌ ಗಿಲ್‌, ಆವೇಶ್‌ ಖಾನ್‌, ರಿಂಕು ಸಿಂಗ್‌, ಖಲೀಲ್‌ ಅಹ್ಮದ್‌.

ಪಾಕಿಸ್ತಾನ ತಂಡ: ಬಾಬರ್‌ ಅಜಂ (ನಾಯಕ), ಮೊಹಮದ್‌ ರಿಜ್ವಾನ್‌ (ವಿ.ಕೀ), ಅಬ್ರಾರ್‌ ಅಹ್ಮದ್‌, ಅಝಂ ಖಾನ್‌, ಫಖರ್‌ ಜಮಾನ್‌, ಹ್ಯಾರಿಸ್‌ ರೌಫ್‌, ಇಫ್ತಿಕರ್‌ ಅಹ್ಮದ್‌, ಇಮಾದ್‌ ವಾಸಿಂ, ಅಬ್ಬಾಸ್‌ ಅಫ್ರಿದಿ, ನಸೀಮ್‌ ಸಾ, ಸೈಮ್‌ ಆಯೂಬ್‌, ಶದಾಬ್‌ ಖಾನ್‌, ಶಾಹೀನ್‌ ಶಾ ಅಫ್ರಿದಿ, ಉಸ್ಮಾನ್‌ ಖಾನ್‌, ಮೊಹಮದ್‌ ಅಮೀರ್‌.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

10 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

27 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

40 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago