ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ.
ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ಗಳು ಆರಂಭದಲ್ಲಿಯೇ ಶಾಕ್ ನೀಡಿದರು. ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. ಒಂಬತ್ತು ರನ್ ಗಳಿಸಿ ರಾಹುಲ್ ನಿರ್ಗಮಿಸಿದರೆ ರೋಹಿತ್ ಶರ್ಮಾ15 ರನ್ಗೆ ಲುಂಗಿ ಎನ್ಗಿಡಿ ಎಸೆತಕ್ಕೆ ಕ್ಯಾಚ್ ನೀಡಿ ಔಟ್ ಆದರು.
ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಲಿಲ್ಲ. ಕೇವಲ 12 ರನ್ ಗಳಿಗೆ ಕೋಹ್ಲಿ ನಿರ್ಗಮಿಸಿದರೆ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ದೀಪಕ್ ಹೂಡಾ ಕೂಡ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ (68) ಒಬ್ಬರೇ ಏಕಾಂಗಿಯಾಗಿ ಹೋರಾಡಿದರು. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಸಹಿತ ನಂತರ ಬಂದ ಯಾರೊಬ್ಬರೂ ಎರಡಂಕಿ ದಾಟಲಿಲ್ಲ.
ಡೇವಿಡ್ ಮಿಲ್ಲರ್ ಮತ್ತುಏಡೆನ್ ಮಕ್ರಮ್ ಅರ್ಧ ಶತಕ ಬಾರಿಸಿ ದ. ಆಫ್ರಿಕಾದ ಗೆಲುವನ್ನು ಸುಗಮವಾಗಿಸಿದರು. ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎಂಗಿಡಿ 4 ವಿಕೆಟ್ ಪಡೆದು ಮಿಂಚಿದರು. ಎಡಗೈ ವೇಗಿ ವ್ಯಾಯ್ನೆ ಪಾರ್ನೆಲ್ ಕೂಡ 3 ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಶಾಕ್ ಕೊಟ್ಟರು. ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…