ಕ್ರೀಡೆ

ಭಾರತಕ್ಕೆ ಸೋಲಿನ ರುಚಿ ತೋರಿಸಿದ ದಕ್ಷಿಣ ಆಫ್ರಿಕಾ

  ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ.


ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ಗಳು ಆರಂಭದಲ್ಲಿಯೇ ಶಾಕ್ ನೀಡಿದರು. ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. ಒಂಬತ್ತು ರನ್‌ ಗಳಿಸಿ ರಾಹುಲ್‌ ನಿರ್ಗಮಿಸಿದರೆ ರೋಹಿತ್ ಶರ್ಮಾ15 ರನ್ಗೆ ಲುಂಗಿ ಎನ್ಗಿಡಿ ಎಸೆತಕ್ಕೆ ಕ್ಯಾಚ್ ನೀಡಿ ಔಟ್ ಆದರು.
ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಲಿಲ್ಲ. ಕೇವಲ 12 ರನ್ ಗಳಿಗೆ ಕೋಹ್ಲಿ ನಿರ್ಗಮಿಸಿದರೆ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ದೀಪಕ್ ಹೂಡಾ ಕೂಡ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ (68) ಒಬ್ಬರೇ ಏಕಾಂಗಿಯಾಗಿ ಹೋರಾಡಿದರು. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಸಹಿತ ನಂತರ ಬಂದ ಯಾರೊಬ್ಬರೂ ಎರಡಂಕಿ ದಾಟಲಿಲ್ಲ.
ಡೇವಿಡ್ ಮಿಲ್ಲರ್ ಮತ್ತುಏಡೆನ್ ಮಕ್ರಮ್ ಅರ್ಧ ಶತಕ ಬಾರಿಸಿ ದ. ಆಫ್ರಿಕಾದ ಗೆಲುವನ್ನು ಸುಗಮವಾಗಿಸಿದರು. ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎಂಗಿಡಿ 4 ವಿಕೆಟ್ ಪಡೆದು ಮಿಂಚಿದರು. ಎಡಗೈ ವೇಗಿ ವ್ಯಾಯ್ನೆ ಪಾರ್ನೆಲ್ ಕೂಡ 3 ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಶಾಕ್ ಕೊಟ್ಟರು. ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

10 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

11 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

11 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

12 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

12 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

13 hours ago