ಕ್ರೀಡೆ

ಭಾರತಕ್ಕೆ ಸೋಲಿನ ರುಚಿ ತೋರಿಸಿದ ದಕ್ಷಿಣ ಆಫ್ರಿಕಾ

  ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ.


ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ಗಳು ಆರಂಭದಲ್ಲಿಯೇ ಶಾಕ್ ನೀಡಿದರು. ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. ಒಂಬತ್ತು ರನ್‌ ಗಳಿಸಿ ರಾಹುಲ್‌ ನಿರ್ಗಮಿಸಿದರೆ ರೋಹಿತ್ ಶರ್ಮಾ15 ರನ್ಗೆ ಲುಂಗಿ ಎನ್ಗಿಡಿ ಎಸೆತಕ್ಕೆ ಕ್ಯಾಚ್ ನೀಡಿ ಔಟ್ ಆದರು.
ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಲಿಲ್ಲ. ಕೇವಲ 12 ರನ್ ಗಳಿಗೆ ಕೋಹ್ಲಿ ನಿರ್ಗಮಿಸಿದರೆ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ದೀಪಕ್ ಹೂಡಾ ಕೂಡ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ (68) ಒಬ್ಬರೇ ಏಕಾಂಗಿಯಾಗಿ ಹೋರಾಡಿದರು. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಸಹಿತ ನಂತರ ಬಂದ ಯಾರೊಬ್ಬರೂ ಎರಡಂಕಿ ದಾಟಲಿಲ್ಲ.
ಡೇವಿಡ್ ಮಿಲ್ಲರ್ ಮತ್ತುಏಡೆನ್ ಮಕ್ರಮ್ ಅರ್ಧ ಶತಕ ಬಾರಿಸಿ ದ. ಆಫ್ರಿಕಾದ ಗೆಲುವನ್ನು ಸುಗಮವಾಗಿಸಿದರು. ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎಂಗಿಡಿ 4 ವಿಕೆಟ್ ಪಡೆದು ಮಿಂಚಿದರು. ಎಡಗೈ ವೇಗಿ ವ್ಯಾಯ್ನೆ ಪಾರ್ನೆಲ್ ಕೂಡ 3 ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಶಾಕ್ ಕೊಟ್ಟರು. ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

16 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago