ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ.
ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ಗಳು ಆರಂಭದಲ್ಲಿಯೇ ಶಾಕ್ ನೀಡಿದರು. ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು. ಒಂಬತ್ತು ರನ್ ಗಳಿಸಿ ರಾಹುಲ್ ನಿರ್ಗಮಿಸಿದರೆ ರೋಹಿತ್ ಶರ್ಮಾ15 ರನ್ಗೆ ಲುಂಗಿ ಎನ್ಗಿಡಿ ಎಸೆತಕ್ಕೆ ಕ್ಯಾಚ್ ನೀಡಿ ಔಟ್ ಆದರು.
ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಲಿಲ್ಲ. ಕೇವಲ 12 ರನ್ ಗಳಿಗೆ ಕೋಹ್ಲಿ ನಿರ್ಗಮಿಸಿದರೆ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ದೀಪಕ್ ಹೂಡಾ ಕೂಡ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ (68) ಒಬ್ಬರೇ ಏಕಾಂಗಿಯಾಗಿ ಹೋರಾಡಿದರು. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಸಹಿತ ನಂತರ ಬಂದ ಯಾರೊಬ್ಬರೂ ಎರಡಂಕಿ ದಾಟಲಿಲ್ಲ.
ಡೇವಿಡ್ ಮಿಲ್ಲರ್ ಮತ್ತುಏಡೆನ್ ಮಕ್ರಮ್ ಅರ್ಧ ಶತಕ ಬಾರಿಸಿ ದ. ಆಫ್ರಿಕಾದ ಗೆಲುವನ್ನು ಸುಗಮವಾಗಿಸಿದರು. ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎಂಗಿಡಿ 4 ವಿಕೆಟ್ ಪಡೆದು ಮಿಂಚಿದರು. ಎಡಗೈ ವೇಗಿ ವ್ಯಾಯ್ನೆ ಪಾರ್ನೆಲ್ ಕೂಡ 3 ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಶಾಕ್ ಕೊಟ್ಟರು. ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…