Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

ಇಂದು ಭಾರತ ಆಸ್ಟ್ರೇಲಿಯಾ ಟಿ20 ದ್ವಿತೀಯ ಪಂದ್ಯ ನಡೆಯುವುದೇ?

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!