ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ
ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.
ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ ನಲ್ಲಿ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿರುವ ಭಾರತ ಒತ್ತಡದಲ್ಲಿ ಸಿಲುಕಿದೆ. ಗೆಲ್ಲಲು ಉಳಿದ 6 ವಿಕೆಟ್ ಗೆ 100 ರನ್ ಗಳಿಸಬೇಕಾಗಿದ್ದು ಪಂದ್ಯ ಸಮಸ್ಥಿತಿಯಲ್ಲಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 314 ರನ್ ಗಳಿಗೆ ಔಟಾಗಿದ್ದ ಭಾರತ 87 ರನ್ ಗಳ ಮುನ್ನಡೆಯೊಂದಿಗೆ ವಿಶ್ವಾಸದಲ್ಲಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ 231 ರನ್ ಗೆ ಸರ್ವ ಪತನ ಕಂಡ ಹಿನ್ನೆಲೆಯಲ್ಲಿ ಭಾರತ ನಿರಾಯಾಸವಾಗಿ ಗೆಲ್ಲಬಹುದೆಂದು ನಿರೀಕ್ಷಿಸಲಾಗಿತ್ತು. ಭಾರತದ ಬೌಲರ್ ಗಳ ಸಂಘಟಿತ ಬೌಲಿಂಗ್ ದಾಳಿಯಿಂದಾಗಿ ಬಾಂಗ್ಲಾ ಮತ್ತೆ ಅತ್ಯಲ್ಪ ಮೊತ್ತಕ್ಕೆ ಕುಸಿಯಿತು.
ಭಾರತದ ಪರ ಅಕ್ಷರ್ ಪಟೇಲ್ 3 , ಅಶ್ವಿನ್ ಹಾಗೂ ಸಿರಾಜ್ ತಲಾ ಎರಡು ವಿಕೆಟ್, ಉಮೇಶ್ ಯಾದವ್ ಹಾಗೂ ಉನಾದ್ಕತ್ ತಲಾ ಒಂದು ವಿಕೆಟ್ ಗಳಿಸಿದರು. ಬಾಂಗ್ಲಾ ಪರ ಲಿಂಟನ್ ದಾಸ್ (73) ಹಾಗೂ ಹಸನ್ ಮಾತ್ರ ಅರ್ಧ ಶತಕ(51) ಗಡಿ ದಾಟಿದರು.
ಗೆಲ್ಲಲು 145 ಗುರಿ ಪಡೆದ ಭಾರತ ಆರಂಭದಲ್ಲಿಯೇ ಮುಗ್ಗರಿಸಿತು. ನಾಯಕ ಕೆ.ಎಲ್.ರಾಹುಲ್ (2) ತಮ್ಮ ಕಳಪೆ ಫಾರ್ಮ್ ಮುಂದುವರಿಸಿ ಶಕೀಬ್ ಅಲಿ ಹಸನ್ ಗೆ ವಿಕೆಟ್ ಒಪ್ಪಿಸಿದರು. ಆರಂಭಿಕ ದಾಂಡಿಗ ಶುಭಮನ್ ಗಿಲ್ (7), ಚೇತೇಶ್ವರ ಪೂಜಾರ (6) ವಿರಾಟ್ ಕೊಯ್ಲಿ(1) ಅತ್ಯಲ್ಪ ಮೊತ್ತಕ್ಕೆ (37/4) ಔಟಾದ ಕಾರಣ ಬಾಂಗ್ಲಾ ಗೆಲುವಿನ ಕನಸು ಕಾಣಲು ಕಾರಣರಾದರು.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಮೆಹದಿ ಹಸನ್ 8 ಓವರ್ ಬೌಲ್ ಮಾಡಿ ಕೇವಲ 12 ರನ್ ನೀಡಿ 3 ವಿಕೆಟ್ ಗಳಿಸಿದ್ದು ಭಾರತದ ಪಾಳಯದಲ್ಲಿ ಒತ್ತಡಕ್ಕೆ ಕಾರಣವಾಯಿತು. ಪ್ರಥಮ ಇನ್ನಿಂಗ್ಸ್ ನಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್(93) ಹಾಗೂ ಶ್ರೇಯಸ್ ಅಯ್ಯರ್(87) ಅವರಿಂದಾಗಿ ಇನ್ನಿಂಗ್ಸ್ ಮುನ್ನಡೆಗೆ ಕಾರಣವಾಗಿತ್ತು. ಇದೀಗ ದ್ವಿತೀಯ ಇನ್ನಿಂಗ್ಸ್ ನಲ್ಲೂ ಗೆಲುವಿನ 100 ರನ್ ಕಲೆ ಹಾಕಲು ಭಾರತ ಇವರನ್ನೇ ನೆಚ್ಚಿಕೊಂಡಿದೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಅಕ್ಷರ್ ಪಟೇಲ್ ಔಟಾಗದೆ 26 ಹಾಗೂ ಜೆ.ಉನಾದ್ಕತ್ 3 ರನ್ ಗಳೊಂದಿಗೆ ಕ್ರೀಸ್ ನಲ್ಲಿದ್ದಾರೆ. ಇನ್ನೂ ಎರಡು ದಿನಗಳ ಆಟ ಬಾಕಿ ಇದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…