ಕ್ರೀಡೆ

ರೋಚಕ ಘಟ್ಟದಲ್ಲಿ ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯ

ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ

ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.
ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ ನಲ್ಲಿ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿರುವ ಭಾರತ ಒತ್ತಡದಲ್ಲಿ ಸಿಲುಕಿದೆ. ಗೆಲ್ಲಲು ಉಳಿದ 6 ವಿಕೆಟ್ ಗೆ 100 ರನ್ ಗಳಿಸಬೇಕಾಗಿದ್ದು ಪಂದ್ಯ ಸಮಸ್ಥಿತಿಯಲ್ಲಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 314 ರನ್ ಗಳಿಗೆ ಔಟಾಗಿದ್ದ ಭಾರತ 87 ರನ್ ಗಳ ಮುನ್ನಡೆಯೊಂದಿಗೆ ವಿಶ್ವಾಸದಲ್ಲಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ 231 ರನ್ ಗೆ ಸರ್ವ ಪತನ ಕಂಡ ಹಿನ್ನೆಲೆಯಲ್ಲಿ ಭಾರತ ನಿರಾಯಾಸವಾಗಿ ಗೆಲ್ಲಬಹುದೆಂದು ನಿರೀಕ್ಷಿಸಲಾಗಿತ್ತು. ಭಾರತದ ಬೌಲರ್ ಗಳ ಸಂಘಟಿತ ಬೌಲಿಂಗ್ ದಾಳಿಯಿಂದಾಗಿ ಬಾಂಗ್ಲಾ ಮತ್ತೆ ಅತ್ಯಲ್ಪ ಮೊತ್ತಕ್ಕೆ ಕುಸಿಯಿತು.
ಭಾರತದ ಪರ ಅಕ್ಷರ್ ಪಟೇಲ್ 3 , ಅಶ್ವಿನ್ ಹಾಗೂ ಸಿರಾಜ್ ತಲಾ ಎರಡು ವಿಕೆಟ್, ಉಮೇಶ್ ಯಾದವ್ ಹಾಗೂ ಉನಾದ್ಕತ್ ತಲಾ ಒಂದು ವಿಕೆಟ್ ಗಳಿಸಿದರು. ಬಾಂಗ್ಲಾ ಪರ ಲಿಂಟನ್ ದಾಸ್ (73) ಹಾಗೂ ಹಸನ್ ಮಾತ್ರ ಅರ್ಧ ಶತಕ(51) ಗಡಿ ದಾಟಿದರು.
ಗೆಲ್ಲಲು 145 ಗುರಿ ಪಡೆದ ಭಾರತ ಆರಂಭದಲ್ಲಿಯೇ ಮುಗ್ಗರಿಸಿತು. ನಾಯಕ ಕೆ.ಎಲ್.ರಾಹುಲ್ (2) ತಮ್ಮ ಕಳಪೆ ಫಾರ್ಮ್ ಮುಂದುವರಿಸಿ ಶಕೀಬ್ ಅಲಿ ಹಸನ್ ಗೆ ವಿಕೆಟ್ ಒಪ್ಪಿಸಿದರು. ಆರಂಭಿಕ ದಾಂಡಿಗ ಶುಭಮನ್ ಗಿಲ್ (7), ಚೇತೇಶ್ವರ ಪೂಜಾರ (6) ವಿರಾಟ್ ಕೊಯ್ಲಿ(1) ಅತ್ಯಲ್ಪ ಮೊತ್ತಕ್ಕೆ (37/4) ಔಟಾದ ಕಾರಣ ಬಾಂಗ್ಲಾ ಗೆಲುವಿನ ಕನಸು ಕಾಣಲು ಕಾರಣರಾದರು.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಮೆಹದಿ ಹಸನ್ 8 ಓವರ್ ಬೌಲ್ ಮಾಡಿ ಕೇವಲ 12 ರನ್ ನೀಡಿ 3 ವಿಕೆಟ್ ಗಳಿಸಿದ್ದು ಭಾರತದ ಪಾಳಯದಲ್ಲಿ ಒತ್ತಡಕ್ಕೆ ಕಾರಣವಾಯಿತು. ಪ್ರಥಮ ಇನ್ನಿಂಗ್ಸ್ ನಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್(93) ಹಾಗೂ ಶ್ರೇಯಸ್ ಅಯ್ಯರ್(87) ಅವರಿಂದಾಗಿ ಇನ್ನಿಂಗ್ಸ್ ಮುನ್ನಡೆಗೆ ಕಾರಣವಾಗಿತ್ತು. ಇದೀಗ ದ್ವಿತೀಯ ಇನ್ನಿಂಗ್ಸ್ ನಲ್ಲೂ ಗೆಲುವಿನ 100 ರನ್ ಕಲೆ ಹಾಕಲು ಭಾರತ ಇವರನ್ನೇ ನೆಚ್ಚಿಕೊಂಡಿದೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಅಕ್ಷರ್ ಪಟೇಲ್ ಔಟಾಗದೆ 26 ಹಾಗೂ ಜೆ.ಉನಾದ್ಕತ್ 3 ರನ್ ಗಳೊಂದಿಗೆ ಕ್ರೀಸ್ ನಲ್ಲಿದ್ದಾರೆ. ಇನ್ನೂ ಎರಡು ದಿನಗಳ ಆಟ ಬಾಕಿ ಇದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago